10 ಕೋಟಿ ರೂ. ವೆಚ್ಚದ ಅಭಿವೃದ್ದಿ ಕಾಮಗಾರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ
Minister Lakshmi Hebbalkar launches development work worth Rs. 10 crore
ಬೆಳಗಾವಿ 07: ಬೆಳಗಾವಿ ಗ್ರಾಮೀಣ ವಿಧಾನ ಸಭಾ ಕ್ಷೇತ್ರದಾದ್ಯಂತ ಅಭಿವೃದ್ಧಿಯ ಕ್ರಾಂತಿಯನ್ನೇ ಮಾಡುತ್ತಿರುವ ಕ್ಷೇತ್ರದ ಶಾಸಕರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಇದೀಗ ವೈಭವ ನಗರ ಬಡಾವಣೆಯ ಸಮಗ್ರ ಅಭಿವೃದ್ಧಿಗೆ ಚಾಲನೆ ನೀಡಿದ್ದಾರೆ.
ಶುಕ್ರವಾರ ಸಂಜೆ ನಡೆದ ಸರಳ ಕಾರ್ಯಕ್ರಮದಲ್ಲಿ ನ್ಯೂ ವೈಭವ ನಗರದ ರಸ್ತೆ, ಚರಂಡಿ ಹಾಗೂ ಬೀದಿ ದೀಪಗಳ ಅಳವಡಿಕೆಯ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ, ಸಚಿವರು ಚಾಲನೆ ನೀಡಿದರು. ಸುಮಾರು 10 ಕೋಟಿ ರೂ,ಗಳ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆಯಲಿದ್ದು, ಸ್ಥಳೀಯರ ಸಲಹೆ ಪಡೆದು, ನಿಗದಿತ ಸಮಯದಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ಸಚಿವರು ಸೂಚಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರೋಹಿಣಿ ನಾಥಬುವಾ, ಕಾರ್ಯನಿರ್ವಾಹಕ ಅಧಿಕಾರಿ ಯಶವಂತ ಕುಮಾರ್, ಹೆಸ್ಕಾಂ ಅಧಿಕಾರಿಗಳಾದ ಲಮಾಣಿ, ಅಶ್ವಿನ್ ಶಿಂಧೆ, ಗ್ರಾಮ ಪಂಚಾಯತಿಯ ಸರ್ವ ಸದಸ್ಯರು, ವೈಭವ ನಗರದ ನಿವಾಸಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮುಂತಾದವರು ಉಪಸ್ಥಿತರಿದ್ದರು.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 