ಮೋದಗಾ ಜಾತ್ರೆಯಲ್ಲಿ ಬಳೆ ತೊಡಿಸಿಕೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Minister Lakshmi Hebbalkar wears bangles at Modaga fair
ಬೆಳಗಾವಿ 23: ಮೋದಗಾ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರಾ ಮಹೋತ್ಸವದಲ್ಲಿ ಕುಟುಂಬ ಸದಸ್ಯರೊಂದಿಗೆ ಪಾಲ್ಗೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ದೇವಿಗೆ ಉಡಿ ತುಂಬಿ, ಸರ್ವರ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಿದರು.
ಇದೇ ವೇಳೆ, ಹಸಿರು ಕಾಜಿನ ಬಳೆಗಳನ್ನು ತೊಟ್ಟು ಸಚಿವರು ಖುಷಿಪಟ್ಟರು. ದೇವಿಯ ಕೃಪೆಯನ್ನು ಪಡೆಯುವ ಸೌಭಾಗ್ಯ ಲಭಿಸಿರುವುದು ಖುಷಿ ತಂದಿದೆ. ಈ ಧಾರ್ಮಿಕ ಸಂಭ್ರಮವು ನಂಬಿಕೆ, ಪರಂಪರೆ ಮತ್ತು ಆಧ್ಯಾತ್ಮಿಕತೆಯ ಮಹತ್ವವನ್ನು ಇಮ್ಮಡಿಗೊಳಿಸಲೆಂದು ಹಾರೈಸುತ್ತೇನೆ ಎಂದು ಸಚಿವರು ಹೇಳಿದರು.
ಹಸಿರು ಕಾಜಿನ ಬಳೆಗಳು ನಂಬಿಕೆಯ ಸಂಕೇತ, ಸೌಭಾಗ್ಯದ ಪ್ರತೀಕ. ಪ್ರತಿ ಘಳಿಗೆಯೂ ದೇವಿಯ ಅನುಗ್ರಹದಿಂದ ಪವಿತ್ರವಾಗಲಿ, ಜಾತ್ರೆಯ ಈ ಶುಭ ಸಂದರ್ಭದಲ್ಲಿ ಎಲ್ಲರ ಜೀವನ ಶ್ರೀಮಂತಿಕೆ ಮತ್ತು ಸುಖದಿಂದ ಕೂಡಿರಲಿ ಎಂದರು.
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ
2027ರ ಮೇ. 4ರಿಂದ ಸಂಕೇಶ್ವರ ಮಹಾಲಕ್ಷ್ಮೀ ಜಾತ್ರಾ ಮಹೋತ್ಸವ ಪ್ರಾರಂಭ 