ಮೋದಗಾ ಜಾತ್ರೆಯಲ್ಲಿ ಬಳೆ ತೊಡಿಸಿಕೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Minister Lakshmi Hebbalkar wears bangles at Modaga fair
ಬೆಳಗಾವಿ 23: ಮೋದಗಾ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರಾ ಮಹೋತ್ಸವದಲ್ಲಿ ಕುಟುಂಬ ಸದಸ್ಯರೊಂದಿಗೆ ಪಾಲ್ಗೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ದೇವಿಗೆ ಉಡಿ ತುಂಬಿ, ಸರ್ವರ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಿದರು.
ಇದೇ ವೇಳೆ, ಹಸಿರು ಕಾಜಿನ ಬಳೆಗಳನ್ನು ತೊಟ್ಟು ಸಚಿವರು ಖುಷಿಪಟ್ಟರು. ದೇವಿಯ ಕೃಪೆಯನ್ನು ಪಡೆಯುವ ಸೌಭಾಗ್ಯ ಲಭಿಸಿರುವುದು ಖುಷಿ ತಂದಿದೆ. ಈ ಧಾರ್ಮಿಕ ಸಂಭ್ರಮವು ನಂಬಿಕೆ, ಪರಂಪರೆ ಮತ್ತು ಆಧ್ಯಾತ್ಮಿಕತೆಯ ಮಹತ್ವವನ್ನು ಇಮ್ಮಡಿಗೊಳಿಸಲೆಂದು ಹಾರೈಸುತ್ತೇನೆ ಎಂದು ಸಚಿವರು ಹೇಳಿದರು.
ಹಸಿರು ಕಾಜಿನ ಬಳೆಗಳು ನಂಬಿಕೆಯ ಸಂಕೇತ, ಸೌಭಾಗ್ಯದ ಪ್ರತೀಕ. ಪ್ರತಿ ಘಳಿಗೆಯೂ ದೇವಿಯ ಅನುಗ್ರಹದಿಂದ ಪವಿತ್ರವಾಗಲಿ, ಜಾತ್ರೆಯ ಈ ಶುಭ ಸಂದರ್ಭದಲ್ಲಿ ಎಲ್ಲರ ಜೀವನ ಶ್ರೀಮಂತಿಕೆ ಮತ್ತು ಸುಖದಿಂದ ಕೂಡಿರಲಿ ಎಂದರು.
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ 