ನೆರೆ ಪೀಡಿತ ಪ್ರದೇಶಗಳಿಗೆ ಸಚಿವ ಎಂ.ಬಿ ಪಾಟೀಲ, ಶಾಸಕ ಮನಗೂಳಿ ಭೇಟಿ
Minister M.B. Patil, MLA Managooli visit flood-affected areas
ಲೋಕದರ್ಶನ ವರದಿ
ನೆರೆ ಪೀಡಿತ ಪ್ರದೇಶಗಳಿಗೆ ಸಚಿವ ಎಂ.ಬಿ ಪಾಟೀಲ, ಶಾಸಕ ಮನಗೂಳಿ ಭೇಟಿ
ಸಿಂದಗಿ 10: ಇತ್ತೀಚೆಗೆ ನೆರೆ ಪೀಡಿತ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ ಪಾಟೀಲ ಹಾಗೂ ಸಿಂದಗಿ ಶಾಸಕ ಅಶೋಕ ಮನಗೂಳಿ ಭೇಟಿ ನೀಡಿದ್ದರು.
ದೇವಣಗಾಂವ ಸೇತುವೆಯಲ್ಲಿ ಗುಂಡಿಗಳು ಬಿದ್ದು ಸಂಪರ್ಕ ಕಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಸೇತುವೆ ಸಬಲೀಕರಣಕ್ಕೆ ಸಕರಾರ ಅನುದಾನ ಬಿಡುಗಡೆ ಮಾಡಲು ಸಮ್ಮತಿ ಸೂಚಿಸಿದ್ದು, ಶೀಘ್ರದಲ್ಲೇ ಸೇತುವೆ ದುರಸ್ತಿ ಕಾಮಗಾರಿ ಕೈಗೊಳ್ಳಲಿದ್ದೇವೆ ಎಂದು ಶಾಸಕ ಅಶೋಕ ಮನಗೂಳಿಯವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಅಪಾರ ಪ್ರಮಾಣದಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದಾಗಿ ಸಿಂದಗಿ ಮತಕ್ಷೇತ್ರದ ಓರಾದ ಸದಾಶಿವಗಡ್ ರಾಜ್ಯ ಹೆದ್ದಾರಿ 34ರಲ್ಲಿ ಬರುವ ಆಲಮೇಲ ತಾಲೂಕಿನ ದೇವಣಗಾಂವ ಗ್ರಾಮದ ಭೀಮಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಸೇತುವೆಯಲ್ಲಿ ಗುಂಡಿಗಳು ಬಿದ್ದು ಹಾಳಾಗಿದ್ದು, ಇದರ ಸಬಲೀಕರಣಕ್ಕಾಗಿ ರಾಜ್ಯ ಸರ್ಕಾರ ರೂ.3 ಕೋಟಿ ಅನುದಾನ ಬಿಡುಗಡೆಗೊಳಿಸಲು ಮುಂದಾಗಿದೆ. ಸೇತುವೆ ದುರಸ್ತಿ ಬಗ್ಗೆ ಸಚಿವರ ಗಮನಕ್ಕೂ ಶಾಸಕರು ತೆಗೆದುಕೊಂಡು ಬಂದಿದ್ದರು. ಅದರಂತೆ ಇದೀಗ ಅನುದಾನ ತರುವಲ್ಲಿ ಯಶಸ್ವಿಯಾಗಿದ್ದಾರೆ.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 