ನೆರೆ ಪೀಡಿತ ಪ್ರದೇಶಗಳಿಗೆ ಸಚಿವ ಎಂ.ಬಿ ಪಾಟೀಲ, ಶಾಸಕ ಮನಗೂಳಿ ಭೇಟಿ
Minister M.B. Patil, MLA Managooli visit flood-affected areas
ಲೋಕದರ್ಶನ ವರದಿ
ನೆರೆ ಪೀಡಿತ ಪ್ರದೇಶಗಳಿಗೆ ಸಚಿವ ಎಂ.ಬಿ ಪಾಟೀಲ, ಶಾಸಕ ಮನಗೂಳಿ ಭೇಟಿ
ಸಿಂದಗಿ 10: ಇತ್ತೀಚೆಗೆ ನೆರೆ ಪೀಡಿತ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ ಪಾಟೀಲ ಹಾಗೂ ಸಿಂದಗಿ ಶಾಸಕ ಅಶೋಕ ಮನಗೂಳಿ ಭೇಟಿ ನೀಡಿದ್ದರು.
ದೇವಣಗಾಂವ ಸೇತುವೆಯಲ್ಲಿ ಗುಂಡಿಗಳು ಬಿದ್ದು ಸಂಪರ್ಕ ಕಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಸೇತುವೆ ಸಬಲೀಕರಣಕ್ಕೆ ಸಕರಾರ ಅನುದಾನ ಬಿಡುಗಡೆ ಮಾಡಲು ಸಮ್ಮತಿ ಸೂಚಿಸಿದ್ದು, ಶೀಘ್ರದಲ್ಲೇ ಸೇತುವೆ ದುರಸ್ತಿ ಕಾಮಗಾರಿ ಕೈಗೊಳ್ಳಲಿದ್ದೇವೆ ಎಂದು ಶಾಸಕ ಅಶೋಕ ಮನಗೂಳಿಯವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಅಪಾರ ಪ್ರಮಾಣದಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದಾಗಿ ಸಿಂದಗಿ ಮತಕ್ಷೇತ್ರದ ಓರಾದ ಸದಾಶಿವಗಡ್ ರಾಜ್ಯ ಹೆದ್ದಾರಿ 34ರಲ್ಲಿ ಬರುವ ಆಲಮೇಲ ತಾಲೂಕಿನ ದೇವಣಗಾಂವ ಗ್ರಾಮದ ಭೀಮಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಸೇತುವೆಯಲ್ಲಿ ಗುಂಡಿಗಳು ಬಿದ್ದು ಹಾಳಾಗಿದ್ದು, ಇದರ ಸಬಲೀಕರಣಕ್ಕಾಗಿ ರಾಜ್ಯ ಸರ್ಕಾರ ರೂ.3 ಕೋಟಿ ಅನುದಾನ ಬಿಡುಗಡೆಗೊಳಿಸಲು ಮುಂದಾಗಿದೆ. ಸೇತುವೆ ದುರಸ್ತಿ ಬಗ್ಗೆ ಸಚಿವರ ಗಮನಕ್ಕೂ ಶಾಸಕರು ತೆಗೆದುಕೊಂಡು ಬಂದಿದ್ದರು. ಅದರಂತೆ ಇದೀಗ ಅನುದಾನ ತರುವಲ್ಲಿ ಯಶಸ್ವಿಯಾಗಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 