ಉದ್ಯೋಗ ವಾಹಿನಿ ಜಾಗೃತಿ ರಥಕ್ಕೆ ಸಚಿವ ಆರ್.ಶಂಕರ್ ಚಾಲನೆ
ಲೋಕದರ್ಶನವರದಿ
ರಾಣೇಬೆನ್ನೂರು ಜೂ.27: ತಾಲೂಕಿನಲ್ಲಿ ಸತತ 5 ವರ್ಷಗಳ ಕಾಲ ಬರಗಾಲದ ಛಾಯೆ ಆವರಿಸಿದ್ದು, ಈದೀಗ ಮತ್ತೆ ಮುಂಗಾರು ಮಳೆ ಬಾರದೆ ಇರುವುದರಿಂದ ಜನ-ಜಾನುವಾರುಗಳಿಗೆ ಮೇವು ಮತ್ತು ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುಂಜಾಗ್ರತೆ ಕ್ರಮ ಕೈಗೊಳ್ಳಲಾಗಿದೆ. ಜೊತೆಗೆ ಜನರು ಉದ್ಯೋಗಕ್ಕಾಗಿ ವಲಸೆ ಹೋಗದಂತೆ ತಮ್ಮ ಗ್ರಾಮದಲ್ಲಿ ಕೆಲಸ ಮಾಡಲು ಉದ್ಯೋಗಖಾತರಿ ಯೋಜನೆಯಲ್ಲಿ ಅವಕಾಶವಿದ್ದು ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಪೌರಾಡಳಿತ ಸಚಿವ ಆರ್.ಶಂಕರ್ ಹೇಳಿದರು.
ಬುಧವಾರ ನಗರದ ತಾಪಂ ಕಛೇರಿ ಆವರಣದಲ್ಲಿ ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಮಾಹಿತಿ ಶಿಕ್ಷಣ ಸಂವಹನ ಚಟುವಟಿಕೆಯಡಿ ಉದ್ಯೋಗ ವಾಹಿನಿ ಜಾಗೃತಿರಥ ಸಂಚಾರಕ್ಕೆ ಚಾಲನೆ ನೀಡಿ ಮಾತನಾಡಿದರು. ನರೇಗಾ ಯೋಜನೆಯ ಮಾಹಿತಿಯನ್ನು ನೀಡಲು ಸರಕಾರವು ವಾಹನವನ್ನು ಜೂ.27 ರಿಂದ 6 ದಿನಗಳ ಕಾಲ ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಹಳ್ಳಿಗಳಿಗೆ ಸಂಚರಿಸಲಿದೆ ಎಂದರು.
ಸರಕಾರವು ತಾಲೂಕನ್ನು ಬರಪೀಡಿತ ಎಂದು ಘೋಷಿಸಿದ ನಿಮಿತ್ಯ ಈ ಸಂಚಾರದ ವ್ಯವಸ್ಥೆ ಮಾಡಿದೆ.
ಈ ವಾಹನವು ಗ್ರಾಮಗಳ ಭೇಟಿ ಸಮಯದಲ್ಲಿ ಗ್ರಾಮೀಣ ಜನರಿಗೆ ನರೇಗಾ ಯೋಜನೆಯ ಸಂಪೂರ್ಣ ಮಾಹಿತಿಯನ್ನು ನೀಡುವುದು ಕೂಲಿಕಾರರ, ಕೂಲಿ ಬೇಡಿಕೆ, ಹೊಸ ಉದ್ಯೋಗಚೀಟಿ ಬೇಡಿಕೆ ಮತ್ತು ವೈಯಕ್ತಿಕ ಕಾಮಗಾರಿಗಳ ಬೇಡಿಕೆಯ ಮಾಹಿತಿಯನ್ನು ತಿಳಿಸಲಾಗುವುದು ಎಂದು ಹೆಳಿದರು.
ತಾಪಂ ಕಾರ್ಯನಿವರ್ಾಹಕ ಅಧಿಕಾರಿ ಎಸ್.ಎಮ್. ಕಾಂಬಳೆ, ತಹಶೀಲ್ದಾರ ಸಿ.ಎಸ್ ಕುಲಕುಣರ್ಿ, ತಾ.ಪಂ ಸಹಾಯಕ ನಿದರ್ೇಶಕ ಅಶೋಕ ನಾರಜ್ಜಿ, ವ್ಯವಸ್ಥಾಪಕ ಬಸವರಾಜ ಶಿಡೇನೂರು, ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಶ್ರಿಧರ್, ನಗರ ಸಭೆ ಪೌರಾಯುಕ್ತ ಡಾ.ಎನ್ ಮಹಾಂತೇಶ, ಐಇಸಿ ಸಂಯೋಜಕ ಡಿ ವಿ ಅಂಗೂರು, ಅಕ್ಷರ ದಾಸೋಹದ ಸಹಾಯಕ ನಿದರ್ೇಶಕ ಲಿಂಗರಾಜ ಸುತ್ತುಕೋಟೆ, ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಅರಣ್ಯ ಇಲಾಖೆ ಸೇರಿದಂತೆ ಸರಕಾರದ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 