ಕಚೇರಿಯಲ್ಲಿ ಪೂಜೆ ನೆರವೇರಿಸಿ ಕಾರ್ಯಾರಂಭ ಮಾಡಿದ ಸಚಿವ ಎಸ್.ಟಿ.ಸೋಮಶೇಖರ್
ಬೆಂಗಳೂರು, ಫೆ. 13, ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ್ ವಿಕಾಸಸೌಧದಲ್ಲಿ ಸರ್ಕಾರದಿಂದ ತಮಗೆ ಹಂಚಿಕೆಯಾಗಿರುವ ಕೊಠಡಿಗೆ ಇಂದು ಕುಟುಂಬ ಸಮೇತರಾಗಿ ಆಗಮಿಸಿ ಪೂಜೆ ನೆರವೇರಿಸಿ, ಕಾರ್ಯಾರಂಭ ಮಾಡಿದರು. ವಿಕಾಸಸೌಧದ ನೆಲಮಹಡಿಯ ಕೊಠಡಿ ಸಂಖ್ಯೆ 38 ರಲ್ಲಿ ಹಂಚಿಕೆಯಾಗಿರುವ ಕೊಠಡಿಗೆ ಸಾಂಪ್ರದಾಯಿಕ ವಿಧಿವಿಧಾನಗಳ ಮೂಲಕ ಪೂಜೆ ಸಲ್ಲಿಸಿ ಮೊದಲ ಬಾರಿಗೆ ಕಚೇರಿ ಪ್ರವೇಶಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಗೆ ಸಹಕಾರ ಇಲಾಖೆ ನೀಡಿರುವುದು ಸಂತಸ ತಂದಿದೆ. ತಮಗೆ ಸಹಕಾರ ಕ್ಷೇತ್ರದಲ್ಲಿ ಅಲ್ಪಸ್ವಲ್ಪ ತಿಳುವಳಿಕೆ ಇದೆ. ಅತಿ ಶೀಘ್ರದಲ್ಲೆ ಹಿರಿಯ ಸಹಕಾರಿಗಳ ಸಭೆ ಕರೆದು ಇಲಾಖೆಗೆ ಸಂಬಂಧಿಸಿ ಮಾಹಿತಿ ಪಡೆಯಲಾಗುವುದು. ಸಹಕಾರ ರಂಗದ ಸಾಲ ಮನ್ನಾ, ಯಶಸ್ವಿನಿ ಯೋಜನೆ ಸೇರಿದಂತೆ ಹಲವು ಯೋಜನೆಗಳ ಬಗ್ಗೆ ಅಧಿಕಾರಿಗಳ ಸಭೆ ಕರೆದು ಮಾಹಿತಿ ಪಡೆದ ಬಳಿಕ ಮುಂದಿನ ಕ್ರಮ ಜರುಗಿಸಲಾಗುವುದು ಎಂದರು.
ಪಕ್ಷದ ಯಾವುದೇ ಗೆಳೆಯರಿಗೆ ಸಂಪುಟ ವಿಸ್ತರಣೆ ಬಗ್ಗೆ ಯಾವುದೇ ಅಸಮಾಧಾನವಿಲ್ಲ. ಮುನಿರತ್ನ ಹಾಗೂ ಪ್ರತಾಪಗೌಡ ಪಾಟೀಲ್ ವಿಷಯದಲ್ಲಿ ಕೋರ್ಟ್ ಕೇಸ್ ಇದ್ದ ಕಾರಣ ವಿಳಂಬವಾಗಿದೆ. ಬುಧವಾರ ಮುನಿರತ್ನ ಕೇಸ್ ಹೈಕೋರ್ಟ್ ನಲ್ಲಿ ವಿಚಾರಣೆಗೆ ಬಂದಿತ್ತು. ಕೋರ್ಟ್ ನಲ್ಲಿ ಕೇಸ್ ಇತ್ಯರ್ಥವಾದ ಬಳಿಕ ಶೀಘ್ರದಲ್ಲಿಯೇ ಅವರು ಕೂಡ ಮತ್ತೆ ಸಕ್ರಿಯ ರಾಜಕೀಯಕ್ಕೆ ಬರುತ್ತಾರೆ. ಅವರಿಗೆ ಸಚಿವ ಸ್ಥಾನ ನೀಡುವುದು ಬಿಡುವುದು ಮುಖ್ಯಮಂತ್ರಿಗೆ ಬಿಟ್ಟ ವಿಚಾರ ಎಂದು ಎಸ್.ಟಿ.ಸೋಮಶೇಖರ್ ಹೇಳಿದರು.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 