ಜಿಲ್ಲಾ ಆಸ್ಪತ್ರೆಯಲ್ಲಿ ಡೇ ಕೇರ್ ಕಿಮೋಥೆರಪಿ ಕೇಂದ್ರ ಉದ್ಘಾಟಿಸಿದ ಸಚಿವ ಸಂತೋಷ ಲಾಡ್
Minister Santhosh Lad inaugurated Day Care Chemotherapy Center at District Hospital
ಧಾರವಾಡ ಜೂ.17: ಧಾರವಾಡ ಜಿಲ್ಲಾ ಆಸ್ಪತ್ರೆಯಲ್ಲಿ ಡೇ ಕೇರ್ ಕಿಮೋಥೆರಪಿ ಕೇಂದ್ರವನ್ನು ನಿನ್ನೆ (ಜೂನ್ 16) ರಂದು ಸಂಜೆ ಕಾರ್ಮಿಕ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಹಾಗೂ ಜಿಲ್ಲಾಧಿಕಾರಿ ದಿವ್ಯಾ ಪ್ರಭು ಮತ್ತು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಉದ್ಘಾಟಿಸಿದರು.
ನಂತರ ಅವರು ಮಾತನಾಡಿ, ಧಾರವಾಡ ಜಿಲ್ಲಾ ಆಸ್ಪತ್ರೆಯಲ್ಲಿ ಡೇ ಕೇರ್ ಕಿಮೋಥೆರಪಿ ಕೇಂದ್ರವನ್ನು ಎ.ಬಿ.ಎ.ಆರ್.ಕೆ ಯೋಜನೆ ಅಡಿಯಲ್ಲಿ ಊಅಉ ಊಠಿಣಚಿಟ, ಊಣಛಛಚಿಟಟ ಯೊಂದಿಗೆ ಒಡಂಬಡಿಕೆಯೊಂದಿಗೆ ಪ್ರತಿಯೊಂದು ರೋಗಿಗಳಿಗೆ 1 ನೇ ಸೈಕಲ್ ಚಿಕಿತ್ಸೆಯನ್ನು ಮಾಡಿಕೊಂಡವರಿಗೆ ಮುಂದಿನ ಸೈಕಲ್ನ್ನು ಒಜಜಛಿಚಿಟ ಓಟಿಛಿಠಠಣ ಅವರ ಅಭಿಪ್ರಾಯ ಹಾಗೂ ಸಲಹೆಯಂತೆ ಚಿಕಿತ್ಸೆಗೆ ಪ್ರತಿ ಬುಧವಾರ ಕ್ಯಾನ್ಸರ್ ರೋಗದ ತಜ್ಞವೈದ್ಯರಿಂದ ರೋಗಿಗಳನ್ನು ಜಿಲ್ಲಾ ಆಸ್ಪತ್ರೆಯಲ್ಲಿಯೇ ಪರೀಕ್ಷಿಸಲಾಗುವುದು ಇದರಿಂದ 2024-2025 ನೇ ಸಾಲಿನ 242 ರೋಗಿಗಳನ್ನು ಕ್ಯಾನ್ಸರ್ ಚಿಕಿತ್ಸೆಗೆ ಕಳುಹಿಸಲಾಗಿದೆ. ಇಲ್ಲಿ ಚಿಕಿತ್ಸೆ ಸಿಗುವುದರಿಂದ ದೂರದ ಊರಿನಿಂದ ಪರದಾಡುವ ಸಾರ್ವಜನಿಕರಿಗೆ ಅನುಕೂಲವಾಗುವುದು. ಇದರ ಸದುಪಯೋಗವನ್ನು ಪಡೆದುಕೊಳ್ಳಲು ವಿನಂತಿಸಿದರು.ಕಾರ್ಯಕ್ರಮದಲ್ಲಿ ಆಸ್ಪತ್ರೆಯ ಮುಖ್ಯಸ್ಥ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಸಂಗಪ್ಪ. ಎನ್. ಗಾಬಿ, ಸ್ಥಳೀಯ ವೈದ್ಯಾಧಿಕಾರಿ ಡಾ. ಗಿರಿಜಾತಾಯಿ ಜಿ.ಹೆಚ್, ಹಿರಿಯ ತಜ್ಞವೈದ್ಯರುಗಳಾದ ಡಾ. ಮಯೂರ ಕದಂ ಮತ್ತು ಡಾ. ಎಸ್.ಎಮ್. ಸಾಂಬ್ರಾಣಿ, ಶುಶ್ರೂಷಾ ಅಧೀಕ್ಷಕ ವಿಜಯಕುಮಾರ ಮಳಗಿ, ಕಛೇರಿ ಅಧೀಕ್ಷಕ ವಾಯ್.ಹೆಚ್. ಬನಸೋಡೆ ಹಾಗೂ ಇನ್ನುಳಿದ ಸಿಬ್ಬಂದಿಗಳು ಹಾಜರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 