ಸೇತುವೆ ನಿರ್ಮಾಣ ಸ್ಥಳ ಸಚಿವ ಸತೀಶ ಜಾರಕಿಹೋಳಿಯವರಿಂದ ವೀಕ್ಷಣೆ
ಬೀಳಗಿ 16: ತಾಲೂಕಿನ ಬೂದಿಹಾಳ ಎಸ್.ಎಚ್-ಅನಗವಾಡಿ ಗ್ರಾಮದ ನಡುವಿನ ಸೇತುವೆ ನಿರ್ಮಿಸುವ ಸ್ಥಳ ವೀಕ್ಷಣ ಮಾಡಿದ ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೋಳಿ ವೀಕ್ಷಣೆ ಮಾಡಿದರು. ಅವರ ಜೊತೆಯಲ್ಲಿ ಹಟ್ಟಿ ಚಿನ್ನದ ಗಣಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಜೆ.ಟಿ.ಪಾಟೀಲ ಇದ್ದರು.
ಸೇತುವೆ ನಿರ್ಮಿಸುವ ಕುರಿತು ಮನ್ನಿಕೇರಿ ಆಯ್ಬಿಯಲ್ಲಿ ಮಾಧ್ಯಮವದರು ಕೇಳಿದ ಪಶ್ನೆಗೆ ಉತ್ತರಿಸಿದ ಅವರು, ತಾಲೂಕಿನ ಬೂದಿಹಾಳದಲ್ಲಿ ಸೇತುವೆ ನಿರ್ಮಿಸುವುದರಿಂದ ಈ ಭಾಗದಲ್ಲಿ ಬರುವ ಹಳ್ಳಿಗಳಿಗೆ ಸಂಚಾರಕ್ಕೆ ಹೆಚ್ಚು ಅನುಕೂಲ ಆಗಲಿದೆ ಇದಕ್ಕೆ ಹೆಚ್ಚಿನ ಆದ್ಯತೆ ನೀಡುತ್ತೀರಾ ಅಂತಾ ಕೇಳಿದ ಪ್ರಶ್ನೆಗೆ ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ, ನೋಡಿ ರಾಜ್ಯದ ಎಲ್ಲ ಇಂತಹ ಸೇತುವೆ ನಿರ್ಮಾಣ ಬಗ್ಗೆ ಬೇಡಿಕೆಗಳು ಬಂದಿವೆ. ಅತೀ ಮುಖ್ಯವಾಗಿ ಅವಶ್ಯ ಇದ್ದಲ್ಲಿ ಸೇತುವೆ ನಿರ್ಮಾಣ ಮಾಡಬೇಕಾಗುತ್ತದೆ. ರಾಜ್ಯ ತುಂಬೆಲ್ಲ ಪ್ರವಾಸ ಮಾಡಿ ಸ್ಥಳ ವಿಕ್ಷಣೆ ಮಾಡಿದ ಮೇಲೆ ಗೊತ್ತಾಗುತ್ತದೆ. ಸೇತುವೆ ನಿರ್ಮಾಣಕ್ಕೆ ಅವಶ್ಯ ಇದೆಯೋ ಅಥವಾ ಇಲ್ಲ್ಲ ವೆನ್ನುವುದನ್ನು ಅದನ್ನು ನೋಡಿ ಮೊದಲ ನೇಯ ಹಾಗೂ ಎರಡನೇ ಆಧ್ಯತೆ ಕೊಡಬೇಕಾಗುತ್ತದೆ. ನಿಮ್ಮ ಭಾಗದಲ್ಲಿ ಅವಶ್ಯ ಬಿದ್ದರೆ ಮಾತ್ರ ಮಾಡಲಾಗುವುದು ಎಂದರು.
ಮೊನ್ನೆ ಬೆಂಗಳೂರಿನಲ್ಲಿ ನಡೆದ ಆರ್ಸಿಬಿ ವಿಜಯೋತ್ಸವದ ಕಾಲ್ತುಳಿತದಲ್ಲಿ 11 ಜನರು ಪ್ರಾಣವನ್ನೆ ಕಳೆದುಕೊಂಡಿದ್ದರಿಂದ ಇದರಿಂದ ಸರಕಾರಕ್ಕೆ ಮುಜುಗರಾಗಿದೆ ಇದರ ಬಗ್ಗೆ ನಿಮ್ಮ ಅಭಿಪ್ರಾಯ ಏನು ಎಂದು ಕೇಳಿದ ಪ್ರಶ್ನೆಗೆ ಕಾಲ್ತುಳಿದ 11 ಜನರು ಸಾವನ್ನಪ್ಪಿದ ವಿಷಯದಲ್ಲಿ ಸರಕಾರ ಫೆಲೀವರ್ ಆಗಿದ್ದು ನಿಜ. ರಾಜ್ಯದ ಜನತೆ ಮಾತನಾಡುವಂತೆ ಆಗಿದ್ದು ಇದರಿಂದ ಇಡೀ ರಾಜ್ಯಕ್ಕೆ ಮುಜಗುರಾಗಿದ್ದು ನಿಜ ಮುಂದೆ ಈ ರೀತಿಯಾಗದಂತೆ ಸರಕಾರ ಕ್ರಮ ಕೈಗೊಳ್ಳಲಿದೆ ಎಂದರು.
ಈಗಾಗಲೇ ಎರಡು ವರ್ಷದಲ್ಲಿ ಬೀಳಗಿ ಮತಕ್ಷೇತ್ರಕ್ಕೆ ಸಾಕಷ್ಟು ಅನುದಾನ ನೀಡಲಾಗಿದೆ. ಇನ್ನೂ ಅನುದಾನ ಕೊಡಲಾಗುವುದು. ಬೂದಿಹಾಳದಲ್ಲಿ ಸೇತುವೆ ನಿರ್ಮಾಣ ಮಾಡುವುದರಿಂದ ಸಂತ್ರಸ್ತರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಹೇಳಿದಾಗ ಇದನ್ನು ಮುಂದೆ ನೋಡೋಣ ಎಂದರು.
ಬೀಳಗಿ ಕ್ರಾಸ್ ಹತ್ತಿರದ ಶ್ರೀರಾಮ ಮಂದಿರಕ್ಕೆ ಸಚಿವ ಸತೀಶ ಜಾರಕಿಹೊಳಿ ಬೇಟಿ ನೀಡಿ ದೇವರ ದರ್ಶನ ಪಡೆದರು.
ಶಾಸಕ ಜೆ.ಟಿ.ಪಾಟೀಲ, ಲೋಕೋಪಯೋಗಿ ಇಲಾಖೆ ವಿಭಾಗ ಕಾರ್ಯನಿರ್ವಾಹಕ ಇಂಜನೀಯರ್ ಎಇಇ ಜಿ ಆರ್.ದೇಶಪಾಂಡೆ, ತಾಲೂಕಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಣಮಂತ ಕಾಖಂಡಕಿ, ಪಪಂ ಸದಸ್ಯರಾದ ರಾಜು ಭೋರ್ಜಿ, ಬಸವರಾಜ ಹಳ್ಳದಮನಿ, ಸಿದ್ದು ಸಾರಾವರಿ, ಶ್ರೀಶೈಲ ಅಂಟಿನ ಇತರರು ಇದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 