ಯಲ್ಲಮ್ಮ ದೇವಿ ದರ್ಶನ ಪಡೆದ ಸಚಿವ ವಿಜಯ ವಾಡೆತ್ತಿವಾರ
ಲೋಕದರ್ಶನ ವರದಿ
ಉಗರಗೋಳ 11: ಶ್ರೀಕ್ಷೇತ್ರ ಯಲ್ಲಮ್ಮನಗುಡ್ಡಕ್ಕೆ ಮಹಾರಾಷ್ಟ್ರ ಸಕರ್ಾರದ ಪರಿಹಾರ ಮತ್ತು ಪುನರ್ವಸತಿ ಸಚಿವ ವಿಜಯ ನಾಮದೇವರಾವ್ ವಾಡೆತ್ತಿವಾರ ಕುಟುಂಬ ಸಮೇತವಾಗಿ ಶನಿವಾರ ಭೇಟಿ ನೀಡಿ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಿ ದರ್ಶನ ಪಡೆದುಕೊಂಡರು. ಯಲ್ಲಮ್ಮ ದೇವಸ್ಥಾನ ಸಹಾಯಕ ಕಾರ್ಯನಿವರ್ಾಹಕ ಅಧಿಕಾರಿ ಬಸವರಾಜ ಜೀರಗಾಳ ಸಚಿವರನ್ನು ಸನ್ಮಾನಿಸಿದರು.
ನಂತರ ಸುದ್ದಿಗಾರರೊಂದಿಗೆ ವಾಡೆತ್ತಿವಾರ ಮಾತನಾಡಿ, ಆದಿಶಕ್ತಿ ರೇಣುಕಾಂಬೆಯ ಸ್ಥಳ ಜಾಗೃತ ಸ್ಥಾನವಾಗಿದೆ. ಹಲವು ವರ್ಷಗಳಿಂದ ಇಲ್ಲಿ ಭೇಟಿ ನೀಡುತ್ತಿದ್ದೇನೆ. ಕಳೆದ ವಿಧಾನಸಭೆ ಚುನಾವಣೆಗೆ ಸ್ಪಧರ್ಿಸುವ ಮುನ್ನ, ಯಲ್ಲಮ್ಮ ದೇವಿ ಆಶೀವರ್ಾದ ಪಡೆದುಕೊಂಡಿದ್ದೆ. ಅಮ್ಮನ ಹಾರೈಕೆಯಿಂದ ಸಚಿವ ಸ್ಥಾನ ಸಿಕ್ಕಿರುವುದು ಖುಷಿ ತಂದಿದೆ. ಏಳುಕೊಳ್ಳದ ನಾಡಿಗೆ ಭೇಟಿ ನೀಡಿದಾಗ ಸಿಗುವ ಆನಂದವೇ ಬೇರೆ. ಭಕ್ತರು ಶ್ರದ್ಧಾ-ಭಕ್ತಿಯಿಂದ ಪೂಜೆ ಸಲ್ಲಿಸಿ, ತಮ್ಮ ಇಷ್ಟಾರ್ಥ ಈಡೇರಿಸಿಕೊಳ್ಳಬೇಕು ಎಂದರು.
ಮಹಾರಾಷ್ಟ್ರದಲ್ಲಿ ದೇವಸ್ಥಾನಗಳ ಅಭಿವೃದ್ಧಿ ಮತ್ತು ಭಕ್ತರಿಗೆ ಮೂಲಸೌಕರ್ಯ ಒದಗಿಸಲು ವಿಶೇಷ ಯೋಜನೆ ರೂಪಿಸಲಾಗಿದೆ. ಯಲ್ಲಮ್ಮನ ಸಾನ್ನಿಧ್ಯಕ್ಕೆ ಮಹಾರಾಷ್ಟ್ರದಿಂದಲೂ ಹೆಚ್ಚಿನ ಭಕ್ತರು ಆಗಮಿಸುತ್ತಾರೆ. ಹಾಗಾಗಿ, ಇಲ್ಲಿನ ಭಕ್ತರಿಗೆ ನಮ್ಮ ಕಡೆಯಿಂದಲೂ ಅಗತ್ಯ ಸಹಾಯ, ಸಹಕಾರ ನೀಡಲು ಕನರ್ಾಟಕ ಸಕರ್ಾರದೊಂದಿಗೆ ಮಾತುಕತೆ ನಡೆಸುತ್ತೇವೆ. ಜಾತ್ರೆ ಯಶಸ್ಸಿಗೆ ನಾವು ಕೈಜೋಡಿಸುತ್ತೇವೆ ಎಂದು ತಿಳಿಸಿದರು.
ಸಚಿವರ ಪತ್ನಿ ಕಿರಣ ವಡಿವೆತ್ತರ, ಆರ್.ಎಚ್.ಸವದತ್ತಿ, ಸಿ.ಎನ್.ಕುಲಕಣರ್ಿ, ಅಲ್ಲಮಪ್ರಭು ಪ್ರಭುನವರ, ಈರಣ್ಣ ಕುಲಕಣರ್ಿ, ಸದಾನಂದ ಈಟಿ, ಮಲ್ಲಯ್ಯ ತೊರಗಲ್ಲಮಠ, ನಾಗರತ್ನಾ ಚೋಳಿನ, ಅನಿಲ ಗುಡಿಮನಿ, ಯಲ್ಲಮ್ಮ ದೇವಸ್ಥಾನದ ಅರ್ಚಕರಾದ ಪರಸನಗೌಡ ಕಾಳಿಂಗೌಡ್ರ, ಮಂಜುನಾಥಗೌಡ ಸಂದಿಮನಿ ಮತ್ತಿತರರು ಇದ್ದರು.
ಎರಡನೇ ದಿನವೂ ಜನಸಾಗರ:
ಶ್ರೀಕ್ಷೇತ್ರ ಯಲ್ಲಮ್ಮನಗುಡ್ಡದಲ್ಲಿ ಬನದ ಹುಣ್ಣಿಮೆ ಎರಡನೇ ದಿನವಾದ ಶನಿವಾರವೂ ಜನಸಾಗರ ಕಂಡುಬಂತು. ಶುಕ್ರವಾರ ರಾತ್ರಿಯಿಡೀ ಯಲ್ಲಮ್ಮ ದೇವಸ್ಥಾನದ ಪ್ರಾಂಗಣದಲ್ಲಿ ಸರತಿ ಸಾಲಲ್ಲಿ ನಿಂತು ಭಕ್ತರು ದೇವಿ ದರ್ಶನ ಪಡೆದರು. ನಸುಕಿನ ಜಾವವೇ ನೈವೇದ್ಯ ತಯಾರಿಸಿ, ಪರಡಿ ತುಂಬಿದರು. ಯಲ್ಲಮ್ಮನಗುಡ್ಡಕ್ಕೆ ಸಂಪರ್ಕ ಕಲ್ಪಿಸುವ ಉಗರಗೋಳ, ಸವದತ್ತಿ ನೂಲಿನ ಗಿರಣಿ ಹಾಗೂ ಜೋಗುಳಬಾವಿ ಮಾರ್ಗಗಳಲ್ಲಿ ವಾಹನದಟ್ಟಣೆ ಹೆಚ್ಚಿತ್ತು. ಸಂಭ್ರಮದಿಂದ ಜಾತ್ರೆಯಿಂದ ಪಾಲ್ಗೊಂಡ ಭಕ್ತರು, ತಮ್ಮೂರಿನತ್ತ ಹೆಜ್ಜೆ ಹಾಕುತ್ತಿರುವುದು ಕಂಡುಬಂತು. ಬೆಳಗ್ಗೆ ಮತ್ತು ಸಂಜೆ ಯಲ್ಲಮ್ಮನಿಗೆ ವಿಶೇಷ ಪೂಜೆ ಜರುಗಿತು. ಭಕ್ತರು ವಿವಿಧ ಧಾಮರ್ಿಕ ಕಾರ್ಯಕ್ರಮಗಳಲ್ಲಿ ಭಕ್ತಿಯಿಂದ ಪಾಲ್ಗೊಂಡರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 