ಸಚಿವ ಜಮಿರ್ ಅಹ್ಮದಖಾನ್ ಹುಟ್ಟುಹಬ್ಬ: ನೋಟ್ಬುಕ್ ಪೆನ್ನು ವಿತರಣೆ
Minister Zamir Ahmad Khan's birthday: Notebook and pen distribution
ಸಚಿವ ಜಮಿರ್ ಅಹ್ಮದಖಾನ್ ಹುಟ್ಟುಹಬ್ಬ: ನೋಟ್ಬುಕ್ ಪೆನ್ನು ವಿತರಣೆ
ಸಿಂದಗಿ 02: ಪ್ರತಿ ವರ್ಷದಂತೆ ಈ ವರ್ಷವೂ ಸಹ ಸಚಿವ ಜಮಿರ್ ಅಹ್ಮದಖಾನ್ ಅವರ ಹುಟ್ಟು ಹಬ್ಬವನ್ನು ಸಾಮಾಜಿಕ ಸೇವೆಯ ಮೂಲಕ ಆಚರಣೆ ಮಾಡಲಾಗುತ್ತಿದೆ ಎಂದು ಕನ್ನಡಪರ ಹೋರಾಟಗಾರ ಸದ್ದಾಂ ಆಲಗೂರ ಹೇಳಿದರು.
ಸಿಂದಗಿ ತಾಲೂಕಿನ ಗೊಲಗೇರಿ ಗ್ರಾಮದ ಪರಮಾನಂದ ಕಿವುಡ ಮತ್ತು ಮೂಕ ಮಕ್ಕಳ ಶಾಲೆಯಲ್ಲಿ ಸಚಿವ ಜಮೀರ್ ಅಹಮ್ಮದ್ಖಾನ್ ಅವರ ಹುಟ್ಟು ಹಬ್ಬದ ನಿಮಿತ್ತ ಅವರ ಅಭಿಮಾನಿ ಬಳಗದ ವತಿಯಿಂದ ವಿಕಲಚೇತನ ಮಕ್ಕಳಿಗೆ ನೋಟ್ಬುಕ್ ಪೆನ್ನುಗಳನ್ನು ವಿತರಿಸಿ ಮಾತನಾಡಿದ ಅವರು, ಇಂತಹ ಕಾರ್ಯಕ್ರಮಗಳು ಪ್ರೇರಣೆಯಾಗಬೇಕು. ಅವರ ಅಭಿಮಾನಿ ಬಳಗವು ಇಂತಹ ಸಮಾಜಮುಖಿ ಕಾರ್ಯಗಳಿಗೆ ಸದಾ ಸಿದ್ಧ ಎಂದರು.
ಪತ್ರಕರ್ತ ಇಸ್ಮಾಯಿಲ್ ಶೇಖ್ ಪ್ರಾಸ್ತಾವಿಕ ಮಾತನಾಡಿದರು. ಮುಖಂಡ ಮಡಿವಾಳ ನಾಯ್ಕೋಡಿ ಸ್ವಾಗತಿಸಿದರು. ಪೈಗಂಬರ್ ಬುಕ್ಕದ್, ರಹೀಮ್ ಬೆನಕನಹಳ್ಳಿ, ಶ್ರೀಶೈಲ ಹಿಪ್ಪರಗಿ, ರಫೀಕ್ ಮುಲ್ಲಾ, ಅಪ್ಪು ದೇಸಾಯಿ, ರಸೀಧ್ ಕುಮಸಗಿ, ರಜಾಕ್ ಪಟೇಲ್, ಇಸ್ಮಾಯಿಲ್ ಹಳ್ಳಿಮನಿ, ದತ್ತಾತ್ರೇಯ ಕಲಕೇರಿ, ಸಲಿಂ ಅಸಂತಾಪುರ ಸೇರಿದಂತೆ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 