ದಿ.11ರಿಂದ 18ರವರೆಗೆ ಸಚಿವ ಜಾರಕಿಹೊಳಿ ಪ್ರವಾಸ
ಗೋಕಾಕ: ಪೌರಾಡಳಿತ ಹಾಗೂ ಬಂದು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ರಮೇಶ ಜಾರಕಿಹೊಳಿ ಅವರು ಜಿಲ್ಲೆಯಲ್ಲಿ ದಿ.11ರಿಂದ 18ರವರೆಗೆ ಪ್ರವಾಸ ಕೈಕೊಳ್ಳಲಿದ್ದು ಅದರ ವಿವರ.
ದಿ. 11 ಮತ್ತು 12ರಂದು ಗೋಕಾಕದಲ್ಲಿ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗಿ. ಮತ್ತು ಸಾರ್ವಜನಿಕರ ಭೇಟಿ ಮಾಡಿ ಇಲ್ಲಿಯೇ ವಾಸ್ತವ್ಯ ಮಾಡುವರು.
ದಿ. 13ರಂದು ಮುಂಜಾನೆ ಗೋಕಾಕದಿಂದ ಹೊರಟು 10-30ಕ್ಕೆ ಅಥಣಿಯಲ್ಲಿ ಡಾ. ಬಿ.ಆರ್.ಅಂಬೇಡಕರ ಭವನ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಂತರ ರಡರಟ್ಟಿ, ಸತ್ತಿ, ತೇಲಸಂಗ ಗ್ರಾಮಗಳಿಗೆ ಭೇಟಿ ನೀಡಿ ಅಲ್ಲಿಂದ ಗೋಕಾಕಕ್ಕೆ ಹಿಂತಿರುಗಿ ವಾಸ್ತವ್ಯ.
ದಿ. 14ರಂದು ಗೋಕಾಕದಲ್ಲಿ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗಿ. ಮತ್ತು ಸಾರ್ವಜನಿಕರ ಭೇಟಿ ಮಾಡಿ ಇಲ್ಲಿಯೇ ವಾಸ್ತವ್ಯ ಮಾಡುವರು.
ದಿ. 15ರಂದು ಗೋಕಾಕದಿಂದ ಹೊರಟು ಬೆಳಗಾವಿಯಲ್ಲಿ ನಡೆಯುವ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ನಂತರ ಗೋಕಾಕಕ್ಕೆ ಹಿಂತಿರುಗಿ ವಾಸ್ತವ್ಯ.
ದಿ. 16 ಮತ್ತು 17ರಂದು ಗೋಕಾಕದಲ್ಲಿ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗಿ. ಮತ್ತು ಸಾರ್ವಜನಿಕರ ಭೇಟಿ ಮಾಡಿ ಇಲ್ಲಿಯೇ ವಾಸ್ತವ್ಯ ಮಾಡುವರು.
ದಿ. 18ರಂದು 10 ಗಂಟೆಗೆ ಗೋಕಾಕದಿಂದ ಹೊರಟು 11-30 ಗಂಟೆಗೆ ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಗೆ ಭೇಟಿಯಾಗುವರು. ನಂತರ ಗೋಕಾಕಕ್ಕೆ ಹಿಂತಿರುಗಿ ವಾಸ್ತವ್ಯ.
ದಿ. 19ರಂದು ಗೋಕಾಕದಿಂದ ಹೊರಟು 12-30ಕ್ಕೆ ವಿಜಾಪೂರದಲ್ಲಿಯ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಾಯಂಕಾಲ ಹುಬ್ಬಳ್ಳಿ ಆಗಮಿಸಿ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸುವರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 