ಕೇಂದ್ರದಂತೆ ರಾಜ್ಯದಲ್ಲೂ ಸಚಿವರು, ಶಾಸಕರ ವೇತನಕ್ಕೆ ಕತ್ತರಿ ..!
ಬೆಂಗಳೂರು, ಎ 9,ಕರು, ಸಚಿವರು, ಎಂಎಲ್ ಸಿ ಗಳ ಶೇ.30ರಷ್ಟು ವೇತನವನ್ನು ಕಡಿತ ಮಾಡಲು ರಾಜ್ಯ ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ಸಚಿವ ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಜೆ. ಸಿ ಮಾದುಸ್ವಾಮಿ ಈ ವಿಷಯ ವಿಷಯ ಪ್ರಕಟಿ ಇದರಿಂದ 15 ಕೋಟಿ ರೂಪಾಯಿ ಸರ್ಕಾರದ ಬೊಕ್ಕಸಕ್ಕೆ ಬರಲಿದೆ ಎಂದು ಹೇಳಿದರು. ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಟಿಯಲ್ಲಿ ಕೈಗೊಳ್ಳಲಾದ ನಿರ್ಣಯಗಳ ಕುರಿತು ಮಾಹಿತಿ ನೀಡಿದರು. ಇನ್ನು ರಾಜ್ಯದಲ್ಲಿ ಎರಡು ತಿಂಗಳಿಗೆ ಆಗುವಷ್ಟು ಪಡಿತರ ಸಂಗ್ರಹವಿದೆ. ರೇಷನ್ ಕಾರ್ಡ್ ಗೆ ಅರ್ಜಿ ಹಾಕುವವರಿಗೂ ರೇಷನ್ ಕೊಡಲು ನಿರ್ಧರಿಸಲಾಗಿದೆ. ರಾಜ್ಯದಲ್ಲಿ 49 ತಾಲೂಕು ಬರಪೀಡಿತ ಪ್ರದೇಶವೆಂದು ಘೋಷಣೆ ಮಾಡಿದ್ದು, ಪ್ರತಿ ತಾಲೂಕಿಗೆ ತಲಾ 50 ಲಕ್ಷ ರೂಪಾಯಿ ಬಿಡುಗಡೆ ಮಾಡಲಾಗಿದೆ. ಈ ಹಣವನ್ನು ಗ್ರಾಮೀಣ ಮತ್ತು ಪಟ್ಟಣ ಪಂಚಾಯ್ತಿಗಳಿಗೆ ಬಿಡುಗಡೆ ಮಾಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಒಂದು ವರ್ಷದವರೆಗೆ ಶಾಸಕರು, ಸಚಿವರ ಸಂಬಳ ಶೇ.30ರಷ್ಟು ಕಡಿತ ಮಾಡುವುದರಿಂದ 15 ಕೋಟಿ ಹಣ ಬರಲಿದೆ ಎಂದು ಸಚಿವರು ವಿವರಿಸಿದರು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 