ಪೌರ ಕಾರ್ಮಿಕರ ನೇಮಕಾತಿ ಪೂರ್ಣಗೊಳಿಸುವಂತೆ ಸಚಿವರಿಗೆ ಮಾಳಗಿ ಒತ್ತಾಯ
ಹಾವೇರಿ17: ಸ್ಥಳೀಯ ನಗರಸಭೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಪೌರ ಕಾರ್ಮಿಕರ ನೇಮಕಾತಿ ಪ್ರಕ್ರಿಯಯನ್ನು ಬೇಗನೆ ಪೂರ್ಣಗೊಳಿಸುವಂತೆ ಜಿಲ್ಲಾಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿಯವರು ಮುಂದಾಗಬೇಕು ಎಂದು ಡಿಎಸ್ಎಸ್ ರಾಜ್ಯ ಸಮಿತಿ ಸದಸ್ಯಉಡಚಪ್ಪ ಮಾಳಗಿ ಸಚಿವರನ್ನು ಒತ್ತಾಯಿಸಿದ್ದಾರೆ.
ಜಿಲ್ಲೆಯ ಬಹುಪಾಲು ತಾಲೂಕಗಳಲ್ಲಿ ಪೌರ ಕಾರ್ಮಿಕರ ನೇಮಕಾತಿಯನ್ನು ಮಾಡಲಾಗಿದ್ದು, ಜಿಲ್ಲಾ ಕೇಂದ್ರದಲ್ಲಿ 90 ಕ್ಕೂ ಹೆಚ್ಚು ಕಾರ್ಮಿಕರು ದುಡಿಯುತ್ತಿದ್ದಾರೆ. ದುಡಿಯುವ ವರ್ಗಕ್ಕೆ ಈ ರೀತಿ ವಿಳಂಬ ನೀತಿ ಅನುಸರಿಸಿದರೆ ಹೇಗೆ ?ಕೊಡಲೇ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿಯವರು ಮಧ್ಯ ಪ್ರವೇಶ ಮಾಡಿಪೌರ ಕಾರ್ಮಿಕರರಿಗೆ ನ್ಯಾಯ ಒದಗಿಸಿಕೊಡಬೇಕು. ಸುಮಾರು 10-15 ವರ್ಷಗಳಿಂದ ದುಡಿಯುವ ಕಾರ್ಮಿಕರ ಪರವಾಗಿ ಮತ್ತೊರ್ವ ಸಚಿವ ಬಿಸಿ ಪಾಟೀಲ ಹಾಗೂ ಸ್ಥಳೀಯ ಶಾಸಕ ನೆಹರು ಓಲೇಕಾರ ಅವರು ಸರ್ಕಾರ ದ ಮಟ್ಟದಲ್ಲಿ ಸೂಕ್ತ ಕ್ರಮಕೈಗೊಂಡು ಅಧಿಕಾರಿಗಳಿಗೆ ಈ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲು ಸೂಚಿಸುವಂತಾಗಬೇಕಾಗಿದೆ. ಕೊಡಲೇ ಜನಪ್ರತಿನಿಧಿಗಳು ಕಾರ್ಮಿಕರ ನೇಮಕಾತಿ ಬೇಡಿಕೆ ಈಡೇರಿಕೆಗೆ ಸ್ಪಂಧಿಸಿ ಅವರ ಪರವಾಗಿ ನಿಲ್ಲಬೇಕು.ಇನ್ನೂ ವಿಳಂಬ ಧೋರಣೆಯಿಂದ ನಗರಸಭೆ ಕಾರ್ಯವೈಖರಿಯಲ್ಲಿ ಏರುಪೇರುಂಟಾಗಬಹುದು. ಜಿಲ್ಲಾಧಿಕಾರಿಗಳು ಈ ನೇಮಕಾತಿ ಪ್ರಕ್ರಿಯೆಗೆ ಮುಂದಾಗಬೇಕು. ಇನ್ನು ವಿಳಂಬ ಕಂಡು ಬಂದರೆಡಿಎಸ್ಎಸ್ ಸಂಘಟನೆ ಸುಮ್ಮೆನೆ ಇರುವುದಿಲ್ಲ. ಉಗ್ರ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಉಡಚಪ್ಪ ಮಾಳಗಿ ಜನಪ್ರತಿನಿಧಿಗಳಿಗೆ ಆಗ್ರಹಿಸಿದ್ದಾರೆ.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 