ಪ್ರಧಾನಿ ರಾಜಿನಾಮೆಗೆ ಸಚಿವರ ಆಗ್ರಹ
ಕೊಲಂಬೊ, ನ, 18: ಚುನಾವಣಾ ಫಲಿತಾಂಶದ ನಂತರ ಪ್ರಧಾನಿ ರನಿಲ್ ವಿಕ್ರಮ ಸಿಂಘೆ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕು ಎಂದು ಸಂಪುಟ ಸಚಿವರು ಒತ್ತಾಯ ಮಾಡಿದ್ದಾರೆ. ಹೊಸ ಅಧ್ಯಕ್ಷ ರಾಗಿ ಆಯ್ಕೆಯಾದ ಗೊಟಬಯ ಅವರು ಹೊಸ ಸರಕಾರ ರಚಿಸಲು ಅನುಕೂಲವಾಗುವಂತೆ ಕೂಡಲೇ ಪ್ರಧಾನಿ ರಾಜಿನಾಮೆ ನೀಡಿ ಸಹಕರಿಸಬೇಕು ಎಂದು ಆಗ್ರಹ ಪಡಿಸಿದ್ದಾರೆ. ಚುನಾವಣಾ ಸೋಲಿನ ನಂತರ, ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಲು ಪ್ರಧಾನಿ ಸಂಪುಟ ಸಚಿವರ ಜೊತೆ ಮಾತುಕತೆ ಮಾಡಿದ ನಂತರ ಒತ್ತಾಯ ಕೇಳಿಬಂದಿದೆ. ಮೂಲಗಳ ಪ್ರಕಾರ, ಮಂತ್ರಿಗಳಾದ ರೌಫ್ ಹಕೀಮ್, ಮಂಗಳ ಸಮರವೀರ, ಪಟಾಲಿ ಚಂಪಿಕಾ ರಣವಾಕ ಮತ್ತು ನವೀನ್ ದಿಸನಾಯ್ಕ ಅವರುಗಳು ರಾಜೀನಾಮೆ ನೀಡುವಂತೆ ಪ್ರಧಾನಮಂತ್ರಿಯನ್ನು ಕೋರಿದ್ದಾರೆ ಎನ್ನಲಾಗಿದೆ.
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 