ಡಾ. ಅಜಯಸಿಂಗ್ ಅವರಿಗೆ ಸಚಿವ ಸ್ಥಾನ: ತಾಳಿಕೋಟಿಯಲ್ಲಿ ರಜಪೂತ ಸಮಾಜದಿಂದ ಸಂಭ್ರಮಾಚರಣೆ
Ministerial post for Dr. Ajay Singh: Rajput community celebrates in Talikoti
ತಾಳಿಕೋಟಿ 04 : ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಅವರ ಪುತ್ರ ಹಾಗೂ ಜೇವರ್ಗಿ ಕ್ಷೇತ್ರದ ಶಾಸಕ ಡಾ. ಅಜಯಸಿಂಗ್ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ದೊರೆತ ಹಿನ್ನೆಲೆಯಲ್ಲಿ ತಾಳಿಕೋಟಿಯಲ್ಲಿ ರಜಪೂತ ಸಮಾಜದ ಬಾಂಧವರು ಹಾಗೂ ಅಭಿಮಾನಿಗಳು ಸಂಭ್ರಮಾಚರಣೆ ನಡೆಸಿದರು. ಪಟ್ಟಣದ ಮಹಾರಾಣಾ ಪ್ರತಾಪ್ ಸಿಂಹ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ್ದ ಸಮಾಜದ ಸದಸ್ಯರು ಪಟಾಕಿ ಸಿಡಿಸಿ, ಸಿಹಿ ಹಂಚಿ ಹಾಗೂ ಡಾ. ಅಜಯಸಿಂಗ್ ಪರ ಘೋಷಣೆಗಳನ್ನು ಕೂಗಿ ಸಂತಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಸಮಾಜದ ಮುಖಂಡರಾದ ವಿಜಯಸಿಂಗ್ ಹಜೇರಿ, ಭರತಸಿಂಗ್ ವಿಜಾಪುರ, ಗೋವಿಂದಸಿಂಗ್ ಮೂಲಿಮನಿ ಹಾಗೂ ಬಾಬಾ ಪಟೇಲ ಗುಡ್ನಾಳ ಮಾತನಾಡಿ, ಜೇವರ್ಗಿ ಕ್ಷೇತ್ರದಿಂದ ಸತತ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಡಾ. ಅಜಯಸಿಂಗ್ ಅವರಿಗೆ ಸಚಿವ ಸ್ಥಾನ ದೊರೆತಿರುವುದು ಸಂತಸದ ವಿಷಯವಾಗಿದೆ ಎಂದು ಹೇಳಿದರು. ಡಾ. ಅಜಯಸಿಂಗ್ ಅವರು ಈ ಹಿಂದೆ ಕರ್ನಾಟಕ ಸರ್ಕಾರದ ನವದೆಹಲಿ ವಿಶೇಷ ಪ್ರತಿನಿಧಿ,
ವಿಧಾನಸಭೆಯ ಮುಖ್ಯ ಸಚೇತಕ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು, ಅವರಿಗೆ ಸಚಿವ ಸ್ಥಾನ ನೀಡಿರುವುದಕ್ಕಾಗಿ ಕಾಂಗ್ರೆಸ್ ನಾಯಕತ್ವಕ್ಕೆ ಕೃತಜ್ಞತೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ರಜಪೂತ ಸಮಾಜದ ಅಧ್ಯಕ್ಷ ಹರಿಸಿಂಗ್ ಮೂಲಿಮನಿ, ಉಪಾಧ್ಯಕ್ಷ ರತನಸಿಂಗ್ ಕೊಕಟನೂರ, ಪ್ರಕಾಶ ಹಜೇರಿ, ಮಾನಸಿಂಗ್ ಕೊಕಟನೂರ ಸೇರಿದಂತೆ ಸಮಾಜದ ಮುಖಂಡರು, ಸದಸ್ಯರು ಹಾಗೂ ಅಭಿಮಾನಿಗಳು ಭಾಗವಹಿಸಿದ್ದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 