ವ್ಯಾಪಾರ ವಹಿವಾಟು ಪರವಾನಗಿ ನೀಡುವಂತೆ ಶಾಸಕರಲ್ಲಿ ಅಲ್ಪಸಂಖ್ಯಾತರ ಮನವಿ
ಲೋಕದರ್ಶನವರದಿ
ರಾಣೇಬೆನ್ನೂರು05: ನಗರದ ಅಲ್ಪಸಂಖ್ಯಾತರ ಸಮುದಾಯದ ಮುಖಂಡರು ಶಾಸಕ ಅರುಣಕುಮಾರ ಪೂಜಾರ ಅವರಿಗೆ ಭೇಟಿ ನೀಡಿ ನಗರಸಭೆ ಸಿಬ್ಬಂಧಿ ತಮ್ಮ ವ್ಯಾಪಾರ ವಹಿವಾಟಿನ ಗೂಡಂಗಡಿಗಳು ನಡೆಸದಂತೆ ಕಟ್ಟಿನಿಟ್ಟಿನ ಕ್ರಮಕೈಗೊಂಡಿದ್ದು, ನಮಗೆ ವ್ಯಾಪಾರ ವಹಿವಾಟು ನಡೆಸಲು ಅವಕಾಶ ಕಲ್ಪಿಸಿಕೊಡಲು ಮನವಿ ಮಾಡಿದರು.
ಅವರ ಮನವಿಗೆ ಸ್ಪಂಧಿಸಿ ಮಾತನಾಡಿದ ಶಾಸಕರು ಇಡೀ ದೇಶವೇ ಕರೋನಾ ವೈರಸ್ ಭೀತಿಯಲ್ಲಿ ಕಾಲ ತಳ್ಳುತ್ತಾ ಜೀವವನ್ನು ಕೈಯಲ್ಲಿಹಿಡಿದು ಜನರು ಬದುಕುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಆಯಾ ಸ್ಥಳಗಳಲ್ಲಿ ಸ್ವಚ್ಛತೆಯನ್ನು ಕಾಯ್ದುಕೊಳ್ಳದೇ, ಬೇಕಾಬಿಟ್ಟಿಯಾಗಿ ವ್ಯಾಪಾರ, ಮಾಡಲು ಮುಂದಾದರೆ, ನಗರಸಭೆ ಕ್ರಮ ಕೈಗೊಳ್ಳಬೇಕಾಗುತ್ತದೆ. ಅದರಂತೆ ಕ್ರಮಕೈಗೊಂಡಿದ್ದಾರೆ. ಸದ್ಯದ ಸ್ಥಿತಿಯಲ್ಲಿ ಯಾವುದೇ ಕಾರಣಕ್ಕೂ ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಠಪಡಿಸಿದ ಅವರು ವಶಪಡಿಸಿಕೊಂಡಿರುವ ವಸ್ತುಗಳನ್ನು ಮಾತ್ರ ಮರಳಿಸುವಂತೆ ನಗರಸಭೆಗೆ ಸೂಚಿಸುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಸಣ್ಣ-ಪುಟ್ಟ ಗಾಡಿಗಳ ವ್ಯಾಪಾರಸ್ಥರು ಮತ್ತು ಅಲ್ಪಸಂಖ್ಯಾತರ ಸಮುದಾಯದ ಮುಖಂಡರು ಉಪಸ್ಥಿತರಿದ್ದರು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 