ಆರೋಗ್ಯ ಸೇವೆಯಲ್ಲಿ ಮುಂಚೂಣಿಯಲ್ಲಿ ಮಿರಜ್ ಪಟ್ಟಣ: ಪ್ರಕಾಶ ಅಬಿಟಕರ
Miraj town at the forefront of healthcare services: Prakash Abitakar
ಯುನಿಕ್ ಇನ್ಟಿಟ್ಯೂಟ್ ಆಫ್ ಕ್ರಿಟಿಕಲ್ ಕೆರ್ ಲೋಕಾರ್ಪಣೆ;
ಕಾಗವಾಡ, 06: ಆರೋಗ್ಯ ಪಂಢರಿಯೆಂದೇ ಪ್ರಸಿದ್ಧಿ ಹೊಂದಿರುವ ಮಿರಜ್ ಪಟ್ಟಣ ಸ್ವಾತಂತ್ರ್ಯ ಪೂರ್ವದಿಂದಲೂ ಈ ಭಾಗದ ಸಾರ್ವಜನಿಕರಿಗೆ ಆರೋಗ್ಯ ಸೇವೆ ನೀಡುತ್ತಿದ್ದು, ಉತ್ತಮ ಆರೋಗ್ಯ ಸೇವೆ ನೀಡುವಲ್ಲಿ ಉತ್ತರ ಕರ್ನಾಟಕ ಮತ್ತು ಪಶ್ಚಿಮ ಮಹಾರಾಷ್ಟ್ರದಲ್ಲಿಯೇ ಮುಂಚೂಣಿಯಲ್ಲಿದೆಂದು ಮಹಾರಾಷ್ಟ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ಪ್ರಕಾಶ ಅಬಿಟಕರ ಹೇಳಿದ್ದಾರೆ.
ಅವರು, ರವಿವಾರ ದಿ. 06 ರಂದು ಮಹಾರಾಷ್ಟ್ರದ ಮಿರಜ್ ಪಟ್ಟಣದಲ್ಲಿ ನೂತನ ಯುನಿಕ್ ಇನ್ಟಿಟ್ಯೂಟ್ ಆಫ್ ಕ್ರಿಟಿಕಲ್ ಕೆರ್ ಆಸ್ಪತ್ರೆಯನ್ನು ಉದ್ಘಾಟಿಸಿ, ಮಾತನಾಡುತ್ತಿದ್ದರು. ಮಿರಜ್ ಪಟ್ಟಣದ ಹೆಸರಾಂತ ಸುಮಾರು 25 ವೈದ್ಯರು ಸೇರಿ ಈ ಆಸ್ಪತ್ರೆಯನ್ನು ಪ್ರಾರಂಭಿಸಿದ್ದು, ಇದು ಬಡ ರೋಗಿಗಳ ಪಾಲಿಗೆ ಆಶಾಕಿರಣವಾಗಲಿ. ಜೊತೆಗೆ ಮಹಾರಾಷ್ಟ್ರದ ಸರ್ಕಾರದ ಆರೋಗ್ಯ ಯೋಜನೆಗಳನ್ನು ಈ ಆಸ್ಪತ್ರೆಯಲ್ಲಿ ನೀಡಲು ಎಲ್ಲ ರೀತಿಯ ಸಹಕಾರ ಮಾಡುವುದಾಗಿ ತಿಳಿಸಿದರು.
ಆಯುಷಮಾನ ಭಾರತ ಮಿಷನ್ನ ಮಹಾರಾಷ್ಟ್ರ ಕಮೀಟಿಯ ಅಧ್ಯಕ್ಷ ಡಾ. ಓಂಪ್ರಕಾಶ ಸೇಠ ಮಾತನಾಡಿ, ವೈದ್ಯರು ವೈದ್ಯಕೀಯ ಸೇವೆ ನೀಡಬೇಕೇ ವಿನಃ ವೈದ್ಯಕೀಯವನ್ನು ವ್ಯವಸಾಯ ಮಾಡಿಕೊಳ್ಳಬಾರದು. ಆಯುಷಮಾನ ಯೋಜನೆಯ ಮುಖಾಂತರ ನಿಮ್ಮ ಆಸ್ಪತ್ರೆ ಈ ಭಾಗದ ರೋಗಿಗಳಿಗೆ ವರದಾನವಾಗಲಿ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಸುರೇಶಭಾವು ಖಾಡೆ ವಹಿಸಿ, ಮಾತನಾಡಿದರು.
ಈ ವೇಳೆ ಸಾಂಗಲಿ ಸಂಸದ ವಿಶಾಲ ಪಾಟೀಲ, ವಿಧಾನ ಪರಿಷತ್ ಸದಸ್ಯ ಈದ್ರಸ್ ನಾಯಿಕವಾಡಿ, ಕಾಗವಾಡ ಶಾಸಕ ರಾಜು ಕಾಗೆ, ವಿಶ್ವಜೀತ ಕದಂ, ಸಮೀತ ಕದಂ, ಅಜೀತರಾವ ಘೋರಪಡೆ, ಸಂಜಯ ಭೋಕರೆ, ಡಾ. ಶಿರಿಷ ಚವ್ಹಾನ, ಡಾ. ದೀಲಿಪ ಟಕಲೆ, ಡಾ. ಶಿಷಿರ ಗೋಸಾವಿ, ಡಾ. ಸಾನಿಕಾ ಪ್ರಾಣಿ, ಡಾ, ಶಬಾನ ಮುಜಾವರ, ಡಾ. ಸೋಮಶೇಖರ ಪಾಟೀಲ, ಡಾ. ರಿಯಾಜ ಮುಜಾವರ ಸೇರಿದಂತೆ ಪಟ್ಟಣದ ಹೆಸರಾಂತ ವೈದ್ಯರು, ಕರ್ನಾಟಕ ಮತ್ತು ಮಹಾರಾಷ್ಟ್ರದ ಗಣ್ಯರು, ಸಾರ್ವಜನಿಕರು ಉಪಸ್ಥಿತರಿದ್ದರು.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 