ಮೊಬೈಲ್ ಸ್ಯಾನಿಟೈಸರ್ ಬಸ್ ಸಾರಿಗೆ ಸಂಜೀವಿನಿಗೆ ಚಾಲನೆ
ಬೆಂಗಳೂರು, ಏ.11,ಮೊಬೈಲ್ ಸ್ಯಾನಿಟೈಸರ್ ಬಸ್ ಸಾರಿಗೆ ಸಂಜೀವಿನಿಗೆ ಕೆಎಸ್ ಆರ್ ಟಿಸಿ ವ್ಯವಸ್ಥಾಪಕ ನಿರ್ದೇಶಕರಾದ ಶಿವಯೋಗಿ ಸಿ. ಕಳಸದ ಚಾಲನೆ ನೀಡಿದರು.ಕೆಎಸ್ ಆರ್ ಟಿಸಿಯ ಬೆಂಗಳೂರು ಕೇಂದ್ರೀಯ ವಿಭಾಗದ ಬಸ್ ಘಟಕ - 2 ರಲ್ಲಿ ತಾವೇ ಸ್ಯಾನಿಟೈಸರ್ ಸ್ಪ್ರೇ ಗೆ ಒಳಗಾಗುವ ಮೂಲಕ ಶಿವಯೋಗಿ ಕಳಸದ್ ಚಾಲನೆ ನೀಡಿದರು.ಸಾರ್ವಜನಿಕರ ಅನುಕೂಲಕ್ಕಾಗಿ ಇಂದಿನಿಂದ ಬೆಂಗಳೂರಿನಲ್ಲಿ ಸ್ಯಾನಿಟೈಸರ್ ಬಸ್ ಸಂಚರಿಸಲಿದೆ.ಹತ್ತು ವರ್ಷದ ಹಳೆಯ ಬಸ್ಸನ್ನು ಸ್ಯಾನಿಟೈಸರ್ ಬಸ್ ಆಗಿ ಪರಿವರ್ತಿಸಿದ ಕೆ ಎಸ್ ಆರ್ ಟಿ ಸಿ , ಸುಮಾರು 20 ಸಾವಿರ ವೆಚ್ಚದಲ್ಲಿ ಅನುಪಯುಕ್ತ ಬಸ್ಸನ್ನು ಪುನರ್ ನಿರ್ಮಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ಮುಂದಿನ ದಿನಗಳಲ್ಲಿ ಇತರೆ ಜಿಲ್ಲೆಗಳ ಡಿಪೋಗಳಲ್ಲಿ ಸ್ಕ್ಯ್ರಾಪ್ ಬಸ್ ಗಳನ್ನು ಸ್ಯಾನಿಟೈಸರ್ ಬಸ್ ಆಗಿ ಪರಿವರ್ತಿಸಲಾಗುವುದು. ಬಸ್ ಮುಂಭಾಗ ಹತ್ತಿ ಹಿಂಭಾಗ ಇಳಿದರೆ ಸಂಪೂರ್ಣವಾಗಿ ದೇಹಕ್ಕೆ ವೈರಾಣು ನಿರೋಧಕ ದ್ರಾವಣ ಸಿಂಪಡಣೆ ಆಗಲಿದೆ.ಈ ಮೂಲಕ ಕೊರೋನಾ ಸೊಂಕು ನಿವಾರಣೆಗೆ ಮುಂಜಾಗ್ರತಾ ಕ್ರಮದ ಮತ್ತೊಂದು ಉಪಕ್ರಮ ಇದಾಗಿದೆ.ಬಸ್ ನಿಲ್ದಾಣ ಮತ್ತು ಘಟಕಗಳಲ್ಲಿ ಪ್ರಯಾಣಿಕರು ಹಾಗೂ ಸಿಬ್ಬಂದಿಗಳು (ಬಸ್ ಸಂಚಾರ ಇಲ್ಲದಿರುವುದರಿಂದ ) ಓಡಾಟ ಇಲ್ಲದಿರುವುದರಿಂದ, ಬೆಂಗಳೂರು ನಗರದಲ್ಲಿ ಅವಶ್ಯಕ ಸೇವೆ ಸಲ್ಲಿಸುತ್ತಿರುವ ಪೊಲೀಸ್ , ಮೆಡಿಕಲ್, ಪೌರ ಸಿಬ್ಬಂದಿಗಳ ಅನುಕೂಲಕ್ಕಾಗಿ ಈ ಬಸ್ಸು ಸಂಚರಿಸಲಿದೆ ಪ್ರಕಟಣೆ ತಿಳಿಸಿದೆ.ಈ ಸಂದರ್ಭದಲ್ಲಿ ನಿರ್ದೇಶಕರಾದ (ಭದ್ರತಾ ಮತ್ತು ಜಾಗೃತ) ಡಾ. ರಾಮ್ ನಿವಾಸ್ ಸಪೆಟ್, (ಸಿಬ್ಬಂದಿ ಮತ್ತು ಪರಿಸರ) ಕವಿತಾ ಎಸ್ ಮನ್ನಿಕೇರಿ, ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 