ಕಾರ್ಮಿಕರಿಗೆ ಆರೋಗ್ಯ ಘಟಕದ ಸಂಚಾರಿ ವಾಹನ- ಪಠಾಣ
Mobile health unit for workers - Pathanamthitta
ಲೋಕದರ್ಶನ ವರದಿ
ಕಾರ್ಮಿಕರಿಗೆ ಆರೋಗ್ಯ ಘಟಕದ ಸಂಚಾರಿ ವಾಹನ- ಪಠಾಣ
ಶಿಗ್ಗಾವಿ 07 : ಬಡವರು, ಕೂಲಿಕಾರ್ಮಿಕರು ಹಾಗೂ ಕಟ್ಟಡ ಕಾರ್ಮಿಕರಿಗೆ ಉತ್ತಮ ಆರೋಗ್ಯ ಸೇವೆ ನೀಡುವ ದೃಷ್ಟಿಯಿಂದ ಸುಸಜ್ಜಿತ ಹಾಗೂ ಆಧುನಿಕ ಸೌಲಭ್ಯಗಳುಳ್ಳ ಆರೋಗ್ಯ ಘಟಕದ ಸಂಚಾರಿ ವಾಹನಗಳನ್ನು ಆರೋಗ್ಯ ಇಲಾಖೆಗೆ ಒದಗಿಸಲಾಗಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ಯಾಸೀರಖಾನ ಪಠಾನ ಹೇಳಿದರು.
ಪಟ್ಟಣದ ತಹಶೀಲ್ದಾರ ಕಚೇರಿ ಎದುರು ಸಂಚಾರಿ ಆರೋಗ್ಯ ಘಟಕ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಈ ಸಂಚಾರಿ ಘಟಕದಲ್ಲಿ ತಪಾಸಣೆ ಮತ್ತು ಚಿಕಿತ್ಸೆ ಉಚಿತವಾಗಿ ಲಭ್ಯವಾಗಲಿದೆ. ಕಾರ್ಮಿಕರ ಆರೋಗ್ಯ ಸೇವೆಗಾಗಿ, ಅವರಿರುವ ಸ್ಥಳದಲ್ಲಿಯೇ ಆರೋಗ್ಯ ತಪಾಸಣೆಗೆ ಅನುಕೂಲ ಕಲ್ಪಿಸುವ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ಓಷಧೋಪಚಾರ ಮತ್ತು ತುರ್ತು ಆರೋಗ್ಯ ಸೇವೆಗಳನ್ನು ಈ ವಾಹನ ಒದಗಿಸುತ್ತವೆ.
ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಸಮೀತಿ ಉಪಾಧ್ಯಕ್ಷ ಗುಡಪ್ಪ ಜಲದಿ, ಸವಣೂರ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಎಂ.ಜೆ ಮುಲ್ಲಾ, ತಾಲೂಕಾ ಗ್ಯಾರಂಟಿ ಸಮೀತಿ ಅಧ್ಯಕ್ಷ ಎಸ್ ಎಫ್ ಮಣಕಟ್ಟಿ, ಪುರಸಭೆ ಸದಸ್ಯ ಗೌಸಖಾನ್ ಮುನಶಿ, ಮುಖಂಡರಾದ ಚಂದ್ರು ಕೊಡ್ಲಿವಾಡ, ಮುನ್ನಾ ಲಕ್ಷ್ಮೇಶ್ವರ ಸೇರಿದಂತೆ ಕಾಂಗ್ರೇಸ್ ಮುಖಂಡರು, ರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಸಾರ್ವಜನಿಕರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 