ಕಾಶ್ಮೀರ ಕಣಿವೆಯಲ್ಲಿ ಇಂದಿನಿಂದ ಮೊಬೈಲ್ ಸೇವೆ
ನವದೆಹಲಿ, ಅ 12: ಜಮ್ಮು - ಕಾಶ್ಮೀರದಲ್ಲಿ ಪರಿಸ್ಥಿತಿ ದಿನದಿಂದ ದಿನಕ್ಕೆ ಸುಧಾರಣೆಯಾಗುತ್ತಿದ್ದು ಇಂದಿನಿಂದ ಮೊಬೈಲ್ ಸೇವೆ ದೊರೆಯಲಿದೆ ಎಂದು ಸ್ಥಳೀಯ ಅಧಿಕಾರಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ. ಈ ನಡುವೆ ಪ್ರವಾಸಿಗರ ಮೇಲೆ ವಿಧಿಸಿದ್ದ ನಿರ್ಬಂಧವನ್ನು ಗುರುವಾರವಷ್ಟೇ ಸರ್ಕಾರ ಹಿಂದಕ್ಕೆ ಪಡೆದಿತ್ತು. ಕಾಶ್ಮೀರಕ್ಕೆ ಹೆಚ್ಚಿನ ಪ್ರವಾಸಿಗರು, ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಮೊಬೈಲ್ ಸೇವೆಯನ್ನು ಆರಂಭ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಜಮ್ಮು - ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಕೇಂದ್ರ ಸರ್ಕಾರ ವಾಪಸ್ ಪಡೆದುಕೊಂಡ ನಂತರ ಕಣಿವೆ ರಾಜ್ಯದಲ್ಲಿ ಕಳೆದ ಸುಮಾರು 60 ದಿನಗಳಿಂದಲೂ ಸಾಮಾನ್ಯ ಜನಜೀವನ ಬಾಧಿತವಾಗಿತ್ತು. ಗುರುವಾರಷ್ಟೇ ಕಾಶ್ಮೀರ ಸರ್ಕಾರ ಬಂಧನದಲ್ಲಿದ್ದ ಮೂವರು ರಾಜಕೀಯ ನಾಯಕರನ್ನು ಮುಚ್ಚಳಿಕೆ ಬರೆಸಿಕೊಂಡು ಬಿಡುಗಡೆ ಮಾಡಿತ್ತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 