ಕಾಶ್ಮೀರ ಕಣಿವೆಯಲ್ಲಿ ಇಂದಿನಿಂದ ಮೊಬೈಲ್ ಸೇವೆ
ನವದೆಹಲಿ, ಅ 12: ಜಮ್ಮು - ಕಾಶ್ಮೀರದಲ್ಲಿ ಪರಿಸ್ಥಿತಿ ದಿನದಿಂದ ದಿನಕ್ಕೆ ಸುಧಾರಣೆಯಾಗುತ್ತಿದ್ದು ಇಂದಿನಿಂದ ಮೊಬೈಲ್ ಸೇವೆ ದೊರೆಯಲಿದೆ ಎಂದು ಸ್ಥಳೀಯ ಅಧಿಕಾರಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ. ಈ ನಡುವೆ ಪ್ರವಾಸಿಗರ ಮೇಲೆ ವಿಧಿಸಿದ್ದ ನಿರ್ಬಂಧವನ್ನು ಗುರುವಾರವಷ್ಟೇ ಸರ್ಕಾರ ಹಿಂದಕ್ಕೆ ಪಡೆದಿತ್ತು. ಕಾಶ್ಮೀರಕ್ಕೆ ಹೆಚ್ಚಿನ ಪ್ರವಾಸಿಗರು, ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಮೊಬೈಲ್ ಸೇವೆಯನ್ನು ಆರಂಭ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಜಮ್ಮು - ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಕೇಂದ್ರ ಸರ್ಕಾರ ವಾಪಸ್ ಪಡೆದುಕೊಂಡ ನಂತರ ಕಣಿವೆ ರಾಜ್ಯದಲ್ಲಿ ಕಳೆದ ಸುಮಾರು 60 ದಿನಗಳಿಂದಲೂ ಸಾಮಾನ್ಯ ಜನಜೀವನ ಬಾಧಿತವಾಗಿತ್ತು. ಗುರುವಾರಷ್ಟೇ ಕಾಶ್ಮೀರ ಸರ್ಕಾರ ಬಂಧನದಲ್ಲಿದ್ದ ಮೂವರು ರಾಜಕೀಯ ನಾಯಕರನ್ನು ಮುಚ್ಚಳಿಕೆ ಬರೆಸಿಕೊಂಡು ಬಿಡುಗಡೆ ಮಾಡಿತ್ತು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 