ಶಿರಹಟ್ಟಿಯಲ್ಲಿ ಮೋದಿ ಹುಟ್ಟು ಹಬ್ಬ: ಹಾಲು,ಹಣ್ಣು ವಿತರಣೆ
Modi's birthday celebration in Shirahatti: Milk, fruits distributed
ಶಿರಹಟ್ಟಿ 20 : ಪ್ರಧಾನಿ ನರೇಂದ್ರ ಮೋದಿಯವರ 75 ನೇ ಹುಟ್ಟು ಹಬ್ಬದ ಪ್ರಯುಕ್ತ ನಗರ ಬಿಜೆಪಿ ಘಟಕದ ವತಿಯಿಂದ ಪಟ್ಟಣದ ಸರಕಾರಿ ಆರೋಗ್ಯ ಕೇಂದ್ರದಲ್ಲಿರುವ ರೋಗಿಗಳಿಗೆ ಹಾಲು, ಹಣ್ಣು ಹಾಗೂ ಬ್ರೇಡ್ ವಿತರಣೆ ಮಾಡಿದರು.
ಈ ವೇಳೆ ಬಿಜೆಪಿ ನಗರ ಘಟಕದ ಅಧ್ಯಕ್ಷ ನಾಗರಾಜ ಲಕ್ಕುಂಡಿ ಮಾತನಾಡುತ್ತಾ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತ್ಯಾಗ ಮತ್ತು ಸಮರೆ್ಣಯ ಸಂಕೇತವಾಗಿದ್ದು, ಲಕ್ಷಾಂತರ ದೇಶವಾಸಿಗಳಿಗೆ ಸ್ಫೂರ್ತಿಯಾಗಿದ್ದಾರೆ. ತಮ್ಮ ಐದು ದಶಕಗಳ ಸಾರ್ವಜನಿಕ ಜೀವನದಿಂದ ದೇಶವಾಸಿಗಳ ಕಲ್ಯಾಣಕ್ಕಾಗಿ ನಿರಂತರವಾಗಿ ಮತ್ತು ದಣಿವರಿಯದೆ ಶ್ರಮಿಸುತ್ತಿದ್ದಾರೆ. ಪ್ರತಿಯೊಬ್ಬ ನಾಗರಿಕನಿಗೂ 'ರಾಷ್ಟ್ರ ಮೊದಲು' ಎಂಬುದನ್ನು ತೋರಿಸಿದಕೊಟ್ಟಿದ್ದಾರೆ ಎಂದರು.
ಲಕ್ಷಾಂತರ ದೇಶವಾಸಿಗಳ ಜೀವನದಲ್ಲಿ ಊಹಿಸಲಾಗದ ಬದಲಾವಣೆಯನ್ನು ತಂದ ಮತ್ತು ಅವರು 'ಅಭಿವೃದ್ಧಿ ಹೊಂದಿದ' ಮತ್ತು 'ಸ್ವಾವಲಂಬಿ ಭಾರತ'ವನ್ನು ನಿರ್ಮಿಸುವ ಪ್ರಯಾಣದೊಂದಿಗೆ ಸಂಪರ್ಕಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಬಗ್ಗೆ ಇಡೀ ದೇಶವು ಹೆಮ್ಮೆಪಡುತ್ತಿದೆ. ಇವರು ವಿಶ್ವಕಂಡ ಮಹಾನನಾಯಕ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜೆ ಆರ್. ಕುಲಕರ್ಣಿ, ಸಂದೀಪ ಕಪ್ಪತ್ತನವರ, ರಾಮಣ್ಣ ಕಂಬಳಿ, ಪರಶುರಾಮ ಡೊಂಕಬಳ್ಳಿ, ನಂದಾ ಪಲ್ಲೇದ, ಯಲ್ಲಪ್ಪ ಇಂಗಳಗಿ, ಬಸವರಾಜ ವಡವಿ, ಪ್ರವೀಣ ಹೊಸೂರ, ವಿಠ್ಠಲ ಬಿಡವೆ, ಶರಣು ಹೊಸೂರ, ಪ್ರವೀಣಗೌಡ ಪಾಟೀಲ, ಫಕ್ಕೀರೇಶ ಕರಿಗಾರ, ಅಕ್ಬರಸಾಬ ಯಾದಗಿರಿ, ಮಂಜುನಾಥ ಕಾಳಗಿ ಹಾಗೂ ನರೇಂದ್ರ ಮೋದಿ ಅಭಿಮಾನಿ ಬಳಗದವರು ಇದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 