ಅಂತಾರಾಷ್ಟ್ರೀಯ ಆಲೂ ಸಮ್ಮೇಳನದಲ್ಲಿ ಮೋದಿ ಭಾಷಣ
ನವದೆಹಲಿ, ಜ.27 : ಗುಜರಾತ್ ನ ಗಾಂಧಿನಗರದಲ್ಲಿ ನಡೆಯಲಿರುವ ಮೂರನೇ ಅಂತಾರಾಷ್ಟ್ರೀಯ ಆಲೂಗಡ್ಡೆ ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ.
ವಿಡಿಯೋ ಕಾನ್ಫರೆನ್ಸ್ ಮೂಲಕ, ಮೋದಿ ಈ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಆಲೂಗಡ್ಡೆ ಕ್ಷೇತ್ರದಲ್ಲಿ ಸಂಶೋಧನೆ ಮತ್ತು ವ್ಯಾಪಾರ ಅವಕಾಶಗಳ ಬಗ್ಗೆ ಗಮನ ಹರಿಸಲಿದ್ದಾರೆ. ಮತ್ತು ಮುಂಬರುವ ದಶಕಗಳ ಮಾರ್ಗಸೂಚಿಯನ್ನು ಸಹ ರೂಪಿಸುವ ಸಾಧ್ಯತೆ ಇದೆ.
ವಿಶ್ವ ಆಲೂಗೆಡ್ಡ ಸಮ್ಮೇಳನ ಪ್ರತಿ 10 ವರ್ಷಗಳಿಗೊಮ್ಮೆ ನಡೆಸಲಾಗುತ್ತದೆ. ಇದಕ್ಕೂ ಮೊದಲು 1999 ಮತ್ತು 2008 ರಲ್ಲಿ ಈ ಸಮ್ಮೇಳನ ನಡೆದಿತ್ತು.ಭಾರತೀಯ ಕೃಷಿ ಸಂಶೋಧನಾ ಮಂಡಳಿ ಮತ್ತು ಅದರ ಕೇಂದ್ರ ಕೃಷಿ ಸಂಶೋಧನಾ ಸಂಸ್ಥೆ (ಶಿಮ್ಲಾ) ಮತ್ತು ಅಂತರರಾಷ್ಟ್ರೀಯ ಆಲೂಗಡ್ಡೆ ಕೇಂದ್ರದ ಸಹಯೋಗದೊಂದಿಗೆ ಭಾರತೀಯ ಆಲೂಗಡ್ಡೆ ಸಂಘವು ಈ ಸಮ್ಮೇಳನವನ್ನು ಆಯೋಜಿಸಿದೆ.
ಗುಜರಾತ್ ಭಾರತದಲ್ಲಿ ಅತಿದೊಡ್ಡ ಆಲೂಗೆಡ್ಡೆ ಉತ್ಪಾದಿಸುವ ರಾಜ್ಯವಾಗಿದೆ ಮತ್ತು ಭಾರತದಲ್ಲಿ ಆಲೂಗೆಡ್ಡೆ ಕೃಷಿ ಕಳೆದ 11 ವರ್ಷಗಳಲ್ಲಿ ಶೇಕಡಾ 19 ರಷ್ಟು ಹೆಚ್ಚಾಗಿದೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 