ಹೈವೋಲ್ಟೇಜ್ ಮೋದಿ ಯುವಕರಿಗೆ ಉದ್ಯೋಗ ಕೊಡಲಿ; ಡಿ.ಕೆ.ಶಿವಕುಮಾರ್
ಬೆಂಗಳೂರು,ಫೆ.8, ತಮ್ಮನ್ನು ಹೈವೋಲ್ಟೇಜ್ ಎಂದು ಕರೆಯಿಸಿಕೊಳ್ಳುವ ಪ್ರಧಾನಿ ಮೋದಿ,ದೇಶದ ಯುವಕರಿಗೆ ಬಲ್ಬ್ ಕೊಡಲಿ,ಉದ್ಯೋಗ ಕೊಡಲಿ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ರಾಹುಲ್ ಗಾಂಧಿ ಬಗ್ಗೆ ಮೋದಿ ವ್ಯಂಗ್ಯಕ್ಕೆ ಪ್ರತಿಕ್ರಿಯಿಸಿದ ಅವರು,ಯುವಕರಿಗೆ ಉದ್ಯೋಗ ನೀಡಲಿ.ದೇಶದ ಆರ್ಥಿಕತೆಯನ್ನ ಬೇರೆ ಪ್ರಪಂಚ ಬಂದು ಹೊಗಳಬೇಕು.ಅದರಂತೆ ಮೋದಿ ಮೊದಲು ಕೆಲಸ ಮಾಡಲಿ ಎಂದು ಕುಟುಕಿದರು.
ಐಎಎಸ್ ಅಧಿಕಾರಿಗಳು ಸಹ ಕೇಂದ್ರದ ದಬ್ಬಾಳಿಕೆಗೆ ಹೆದರುತ್ತಿದ್ದಾರೆ.ಬಜೆಟ್ನಲ್ಲಿ ಏನು ನೀಡಿಲ್ಲ.ವಿದೇಶಗಳ ಬೆಂಬಲವೂ ಇಲ್ಲ.ಯುವಪೀಳಿಗೆಯನ್ನು ಕೇಂದ್ರ ತಪ್ಪುಹಾದಿಗೆ ಎಳೆಯುತ್ತಿದೆ.ಮುಖ್ಯಮಂತ್ರಿ ಯಡಿಯೂರಪ್ಪ ಸಾಲಮನ್ನಾ ಮಾಡುತ್ತೇವೆ ಎಂದಿದ್ದರು.ಆದರೆ ಈಗ ಅವರದ್ದೇ ಸರ್ಕಾರವಿದ್ದರೂ ರೈತರ ಸಾಲಮನ್ನಾ ಬಗ್ಗೆ ಏಕೆ ಮಾಡುತ್ತಿಲ್ಲ.ಮಹದಾಯಿ ನೊಟಿಫಿಕೇಶನ್ ಗೆ ಇನ್ನೇನು ಬೇಕು.ಕೊಟ್ಟ ತೀರ್ಮಾನ ನೊಟಿಫಿಕೇಶ್ ಮಾಡಲು ಏಕೆ ಆಗುತ್ತಿಲ್ಲ.ಹುಬ್ಬಳ್ಳಿಯ ಬಿಜೆಪಿ ನಾಯಕ ಸಚಿವ ಜಗದೀಶ್ ಶೆಟ್ಟರ್ ಗೆ, ಸಂಸತ್ ಸದಸ್ಯರಿಗೆ ಏನಾಗಿದೆ?ಏಕೆ ಯಾರೂ ಅಲ್ಲಿನ ಯೋಜನೆ ಬಗ್ಗೆ ಮಾತನಾಡುತ್ತಿಲ್ಲ.ಬಿಜೆಪಿಯವರಿಗೆ ಬೇಕಿರುವುದು ಅಧಿಕಾರವಷ್ಟೆ.ಜನರ ಸಮಸ್ಯೆಗಳಿಗೆ ಪರಿಹಾರವಲ್ಲ ಎಂದು ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 