ಗಾಂಧೀನಗರದಲ್ಲಿ ಮೂರು ದಿನಗಳ ಆಲೂಗಡ್ಡೆ ಜಾಗತಿಕ ಸಮಾವೇಶಕ್ಕೆ ಇಂದು ಮೋದಿ ಚಾಲನೆ
ಗಾಂಧೀನಗರ, ಜ 28 ಗುಜರಾತ್ನ ಗಾಂಧಿನಗರದಲ್ಲಿ ಇಂದಿನಿಂದ ಮೂರು ದಿನಗಳ ಆಲೂಗಡ್ಡೆ ಕುರಿತ ಜಾಗತಿಕ ಸಮಾವೇಶ ನಡೆಯಲಿದ್ದು, ರಾಜ್ಯದ ಹಾಸನ, ಚಿಕ್ಕಮಗಳೂರು ಸೇರಿದಂತೆ ಆಲೂಗಡ್ಡೆ ಬೆಳೆಯುವ ರೈತರು, ವ್ಯಾಪಾರಸ್ಥರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಆಲೂಗಡ್ಡೆ ಕುರಿತ ಮೂರನೇ ಜಾಗತಿಕ ಸಮಾವೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಸಂವಾದದ ಮೂಲಕ ಚಾಲನೆ ನೀಡಲಿದ್ದಾರೆ. ಆಲೂಗಡ್ಡೆ ಕೃಷಿಯಲ್ಲಿ ಇತ್ತೀಚಿನ ಸಂಶೋಧನೆ, ಪ್ರಗತಿ, ಸದ್ಯದ ವ್ಯಾಪಾರ ಪರಿಸ್ಥಿತಿ ಮತ್ತಿತರ ಮಾಹಿತಿಯನ್ನು ಮೋದಿ ಅವರು, ರೈತರು ಮತ್ತು ವ್ಯಾಪಾರಸ್ಥರಿಂದ ಸಂವಾದದ ಮೂಲಕ ಪಡೆಯಲಿದ್ದಾರೆ. ಈ ಹಿಂದೆ ೧೯೯೯ ಹಾಗೂ ೨೦೦೮ ರಲ್ಲಿ ಎರಡು ಜಾಗತಿಕ ಆಲೂಗಡ್ಡೆ ಸಮಾವೇಶಗಳು ನಡೆದಿತ್ತು. ಗುರುವಾರದವರೆಗೆ ನಡೆಯಲಿರುವ ಸಮಾವೇಶ ಎಲ್ಲ ಭಾಗಿದಾರರನ್ನು ಒಂದು ವೇದಿಕೆಗೆ ತಂದು ಸಮಸ್ಯೆಗಳ ಬಗ್ಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಲು ವೇದಿಕೆ ಕಲ್ಪಿಸಿದೆ. . ಆಲೂಗಡ್ಡೆ ಕೃಷಿಗೆ ಸಂಬಂಧಿಸಿದ ಪ್ರತಿಯೊಬ್ಬರು ಮುಂದಿನ ಯೋಜನೆಗಳ ಬಗ್ಗೆ ಚರ್ಚಿಸಲು ಸಹ ಸಮಾವೇಶ ಅವಕಾಶ ಕಲ್ಪಿಸಿಕೊಡಲಿದೆ. ಗುಜರಾತ್ ಇಡೀ ದೇಶದಲ್ಲಿ ಅತಿ ಹೆಚ್ಚು ಆಲೂಗಡ್ಡೆ ಬೆಳೆಯುವ ದೇಶವಾಗಿದ್ದು, ಈ ಸಮಾವೇಶಕ್ಕೆ ನೆದರ್ಲ್ಯಾಂಡ್ಸ್ ಸಹಭಾಗಿ ದೇಶವಾಗಿದೆ. ೧೪ ರಾಷ್ಟ್ರಗಳ ನೂರಕ್ಕೂ ಹೆಚ್ಚು ವಿದೇಶಿ ಪ್ರತಿನಿಧಿಗಳು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 