ಆರ್ಬಿಐ ಕ್ರಮಗಳಿಂದ ಮಧ್ಯಮ ವರ್ಗ ಮತ್ತು ವಾಣಿಜ್ಯ-ವಹಿವಾಟುಗಳಿಗೆ ಪ್ರಯೋಜನಕರ-ಪ್ರಧಾನಿ ಮೋದಿ
ನವದೆಹಲಿ,
ಮಾರ್ಚ್ 27 ,ರೆಪೊ ದರ ಕಡಿತ, ಸಾಲಗಳ ಇಎಂಐ ಪಾವತಿ ಮುಂದೂಡಿಕೆ ಮತ್ತು ಹಣ
ಪ್ರಸರಣ ಹೆಚ್ಚಿಸಲು ರಿಸರ್ವ್ ಬ್ಯಾಂಕ್ ತೆಗೆದುಕೊಂಡಿರುವ ನಿರ್ಧಾರವನ್ನು
ಸ್ವಾಗತಿಸಿರುವ ಪ್ರಧಾನಿ ನರೇಂದ್ರ ಮೋದಿ, ಈ ಕ್ರಮಗಳು ಮಾರುಕಟ್ಟೆಯಲ್ಲಿ ಹಣ
ಪ್ರಸರಣವನ್ನು ಹೆಚ್ಚಿಸುವುದಲ್ಲದೆ ಮಧ್ಯಮ ವರ್ಗ ಮತ್ತು ವಾಣಿಜ್ಯ-ವಹಿವಾಟುಗಳಿಗೆ
ನೆರವಾಗಲಿವೆ ಎಂದು ಹೇಳಿದ್ದಾರೆ. ಕರೋನವೈರಸ್ ಪರಿಣಾಮದಿಂದ ದೇಶದ ಆರ್ಥಿಕತೆ
ಕಾಪಾಡಲು ಆರ್ಬಿಐ ದಿಟ್ಟ ಮತ್ತು ಮಹಾ ಕ್ರಮಗಳನ್ನು ಕೈಗೊಂಡಿದೆ. ಈ ಕ್ರಮಗಳಿಂದ ಹಣ
ಪ್ರಸರಣ ಸುಧಾರಿಸುತ್ತದೆಯಲ್ಲದೆ ನಿಧಿಯ ವೆಚ್ಚವನ್ನು ಕಡಿಮೆ ಮಾಡುತ್ತದೆ. ಅಲ್ಲದೆ,
ಮಧ್ಯಮ ವರ್ಗ ಮತ್ತು ವಾಣಿಜ್ಯ-ವಹಿವಾಟುಗಳಿಗೆ ಸಹಕಾರಿಯಾಗಲಿದೆ ಎಂದು ಪ್ರಧಾನಿ ಟ್ವೀಟ್
ಮಾಡಿದ್ದಾರೆ.ಕೊವಿದ್ -19 ನಿಂದ ಉಂಟಾಗುವ ನಷ್ಟವನ್ನು ತಗ್ಗಿಸುವ ಉದ್ದೇಶದಿಂದ
ಆರ್ಬಿಐ ಶುಕ್ರವಾರ ಹಲವಾರು ಕ್ರಮಗಳನ್ನು ಪ್ರಕಟಿಸಿದೆ.ರೆಪೊ ದರವನ್ನು 75 ಮೂಲಾಂಕ
ತಗ್ಗಿಸಿ ಶೇ 4.4 ಕ್ಕೆ ಇಳಿಸಿರುವುದು ಇವುಗಳಲ್ಲಿ ಪ್ರಮುಖವಾಗಿದೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 