ಗೋಕಾಕ: ಮಾಸಿಕ ಉಚಿತ ನೇತ್ರ ತಪಾಸಣೆ
ಲೋಕದರ್ಶನ ವರದಿ
ಗೋಕಾಕ 12: ಇಲ್ಲಿಯ ಲಯನ್ಸ್ ಮತ್ತು ಲಯನೆಸ್ಸ್ ಸಂಸ್ಥೆ ಹಾಗೂ ಹುಬ್ಬಳಿಯ ಎಮ್.ಎಮ್.ಜೋಶಿ ನೇತ್ರ ಚಿಕಿತ್ಸಾಲಯ ಮತ್ತು ಆರೋಗ್ಯ ಇಲಾಖೆ ನಿವೃತ್ತರ ಹಿತವರ್ಧಕ ಸಂಘ ಇವರ ಸಂಯುಕ್ತಾಶ್ರಯದಲ್ಲಿ 42ನೇ ಮಾಸಿಕ ಉಚಿತ ನೇತ್ರ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರವು ಶನಿವಾರದಂದು ನಗರದ ಡಾ. ಮುರಗೋಡ ಆಸ್ಪತ್ರೆಯಲ್ಲಿ ಜರುಗಿತು.
ಈ ಶಿಬಿರದಲ್ಲಿ 36 ಜನರ ನೇತ್ರಗಳನ್ನು ತಪಾಸಣೆ ನಡೆಸಿ, 16 ಜನರ ನೇತ್ರ ಶಸ್ತ್ರ ಚಿಕಿತ್ಸೆಗಾಗಿ ಹುಬ್ಬಳ್ಳಿ ನೇತ್ರ ಚಿಕಿತ್ಸಾಲಯಕ್ಕೆ ಕಳುಹಿಸಲಾಗುವುದು. ಇದೂವರೆಗೆ 1280ಕ್ಕೂ ಹೆಚ್ಚು ಜನರ ನೇತ್ರ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡಿಸಲಾಗಿದೆ ಎಂದು ಸಂಘಟಕ ಜಿ.ಎಸ್.ಸಿದ್ದಾಪೂರಮಠ ಪತ್ರಿಕೆಗೆ ತಿಳಿಸಿದರು. ಈ ಶಿಬಿರದಲ್ಲಿ ಎಮ್.ಎಮ್.ಜೋಶಿ ನೇತ್ರ ಚಿಕಿತ್ಸಾಲಯದ ಡಾ. ಸಚೀನ ಮಹಾಂತವರ, ಡಾ. ಅಶೋಕ ಮುರಗೋಡ, ಡಾ. ಅಶೋಕ ಪಾಟೀಲ, ಡಾ. ಆರ್.ಡಿ.ಪಾಟೀಲ, ಡಾ.ಅಮರ ಮುರಗೋಡ ಸೇರಿದಂತೆ ಅನೇಕರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 