ನಿವೃತ್ತ ನೌಕರರ ಸಂಘದ ಮಾಸಿಕ ಸಭೆ
Monthly meeting of the Retired Employees Association
ಕೊಲ್ಹಾರ 29 : ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ಮಾಸಿಕ ಸಭೆ ಪಟ್ಟಣದ ಎಂಪಿಎಸ್ ಶಾಲಾ ಸಭಾ ಭವನದಲ್ಲಿ ಶನಿವಾರ ಜರುಗಿತು. ಈ ಸಂದರ್ಭದಲ್ಲಿ ಸಂಘದ ಕಾರ್ಯದರ್ಶಿಗಳಾದ ಎಸ್.ಎಸ್ ಪತಂಗಿ ಮಾತನಾಡಿ 1 ಏಪ್ರಿಲ್ 2026 ಕ್ಕಿಂತ ಮುಂಚಿತವಾಗಿ ನಿವೃತ್ತರಾದ ಸರ್ಕಾರಿ ನೌಕರರಿಗೆ ಆರ್ಥಿಕ ಸೌಲಭ್ಯ ಹಾಗೂ ತುಟ್ಟಿಭತ್ಯೆ ನೀಡದಿರುವ ಬಗೆಗೆ ಸರ್ಕಾರ ಕೈಗೊಂಡಿರುವ ಕ್ರಮದ ಕುರಿತು ಸಭೆಗೆ ತಿಳಿಸಿದರು. ನಿವೃತ್ತ ಶಿಕ್ಷಕಾದ ಬಿ.ಎಸ್ ಹಂಗರಗಿ, ಪಿ.ಸಿ ನಾಗರಾಳ ಮಾತನಾಡಿ ಸರಕಾರದ ನೀತಿಗೆ ಆಕ್ಷೇಪ ವ್ಯಕ್ತಪಡಿಸಿ ಆಕ್ರೋಶ ಹಾಕಿದರು. ವಿಷಯದ ಕುರಿತು ಹೋರಾಟ ಹಮ್ಮಿಕೊಳ್ಳಲಾಗುವುದರ ಬಗೆಗೆ ಸಂಘದ ಸದಸ್ಯರೊಂದಿಗೆ ಚರ್ಚಿಸಿದರು.ಸಂಘದ ಪ್ರಸಕ್ತ ವರ್ಷದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಕೂಡ ಈ ಸಂದರ್ಭದಲ್ಲಿ ಜರುಗಿತು.ಕಾರ್ಯಕ್ರಮವನ್ನು ಎಸ್.ಎಸ್ ಪತಂಗಿ ನಿರೂಪಿಸಿ, ಸ್ವಾಗತಿಸಿದರು. ಕೆ.ಯು ಗಿಡ್ಡಪ್ಪಗೋಳ ಅಧ್ಯಕ್ಷತೆ ವಹಿಸಿದ್ದರು.ವಿವಿಧ ಇಲಾಖೆಗಳ ನಿವೃತ್ತ ನೌಕರರು ಸಭೆಯಲ್ಲಿ ಭಾಗವಹಿಸಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 