ನಿವೃತ್ತ ನೌಕರರ ಸಂಘದ ಮಾಸಿಕ ಸಭೆ
Monthly meeting of the Retired Employees Association
ಕೊಲ್ಹಾರ 29 : ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ಮಾಸಿಕ ಸಭೆ ಪಟ್ಟಣದ ಎಂಪಿಎಸ್ ಶಾಲಾ ಸಭಾ ಭವನದಲ್ಲಿ ಶನಿವಾರ ಜರುಗಿತು. ಈ ಸಂದರ್ಭದಲ್ಲಿ ಸಂಘದ ಕಾರ್ಯದರ್ಶಿಗಳಾದ ಎಸ್.ಎಸ್ ಪತಂಗಿ ಮಾತನಾಡಿ 1 ಏಪ್ರಿಲ್ 2026 ಕ್ಕಿಂತ ಮುಂಚಿತವಾಗಿ ನಿವೃತ್ತರಾದ ಸರ್ಕಾರಿ ನೌಕರರಿಗೆ ಆರ್ಥಿಕ ಸೌಲಭ್ಯ ಹಾಗೂ ತುಟ್ಟಿಭತ್ಯೆ ನೀಡದಿರುವ ಬಗೆಗೆ ಸರ್ಕಾರ ಕೈಗೊಂಡಿರುವ ಕ್ರಮದ ಕುರಿತು ಸಭೆಗೆ ತಿಳಿಸಿದರು. ನಿವೃತ್ತ ಶಿಕ್ಷಕಾದ ಬಿ.ಎಸ್ ಹಂಗರಗಿ, ಪಿ.ಸಿ ನಾಗರಾಳ ಮಾತನಾಡಿ ಸರಕಾರದ ನೀತಿಗೆ ಆಕ್ಷೇಪ ವ್ಯಕ್ತಪಡಿಸಿ ಆಕ್ರೋಶ ಹಾಕಿದರು. ವಿಷಯದ ಕುರಿತು ಹೋರಾಟ ಹಮ್ಮಿಕೊಳ್ಳಲಾಗುವುದರ ಬಗೆಗೆ ಸಂಘದ ಸದಸ್ಯರೊಂದಿಗೆ ಚರ್ಚಿಸಿದರು.ಸಂಘದ ಪ್ರಸಕ್ತ ವರ್ಷದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಕೂಡ ಈ ಸಂದರ್ಭದಲ್ಲಿ ಜರುಗಿತು.ಕಾರ್ಯಕ್ರಮವನ್ನು ಎಸ್.ಎಸ್ ಪತಂಗಿ ನಿರೂಪಿಸಿ, ಸ್ವಾಗತಿಸಿದರು. ಕೆ.ಯು ಗಿಡ್ಡಪ್ಪಗೋಳ ಅಧ್ಯಕ್ಷತೆ ವಹಿಸಿದ್ದರು.ವಿವಿಧ ಇಲಾಖೆಗಳ ನಿವೃತ್ತ ನೌಕರರು ಸಭೆಯಲ್ಲಿ ಭಾಗವಹಿಸಿದ್ದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 