ರಸ್ತೆಗಳು, ಆರೋಗ್ಯ ಮತ್ತು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು : ಶಾಸಕ ಲಕ್ಷ್ಮಣ್ ಸವದಿ
More emphasis will be given to roads, health and education: MLA Laxman Savadi
ಸಂಬರಗಿ 30 : ಗಡಿ ಭಾಗದ ಗ್ರಾಮಗಳ ಸಂಪರ್ಕ ಹೊಂದಿರುವ ಗಡಿ ಪ್ರದೇಶದ ಎಲ್ಲಾ ರಸ್ತೆಗಳನ್ನು ಡಾಂಬರೀಕರಣಗೊಳಿಸಿದೆ ಮತ್ತು ಗಡಿ ಪ್ರದೇಶದ ರಸ್ತೆಗಳು ಉತ್ತಮಗೊಂಡಿವೆ. ರಸ್ತೆಗಳು, ಆರೋಗ್ಯ ಮತ್ತು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಶಾಸಕ ಲಕ್ಷ್ಮಣ್ ಸವದಿ ಹೇಳಿದರು. ಸ್ವಾಮಿ ತೋಟ ವಸ್ತಿಯಿಂದ ಅಭ್ಯಳಗೆ ಎರಡು ಕಿಲೋಮೀಟರ್ ರಸ್ತೆಗೆ 3.60 ಲಕ್ಷ ರೂ. ವೆಚ್ಚವಾಗಿದೆ. ಆ ಸಮಯದಲ್ಲಿ, ರಸ್ತೆಯ ಡಾಂಬರೀಕರಣವನ್ನು ಕಾಮಗಾರಿ ಚಾಲನೆ ನೀಡಿ ಮಾತನಾಡಿ ಅವರು ಎರಡು ಕಿಲೋಮೀಟರ್ ರಸ್ತೆಯ ಕೆಲಸ ವಿಳಂಬವಾಗಿ ಹಲವು ವರ್ಷಗಳೇ ನಿನ್ನಗುದ್ಧಿಗೆ ಬಿದ್ದಿತ್ತು .
ಈ ರಸ್ತೆ ಸಂಬರಗಿ ಮೂಲಕ ಖೀಳೀಗಾಂವ್ಗೆ ಹೋಗುತ್ತಿದೆ.ದೇವಸ್ಥಾನಕ್ಕೆ ಹೋಗುವ ಭಕ್ತರಿಗೆ ಇದು ಅನುಕೂಲಕರವಾಗಿದೆ. ಕಳೆದ ಇಪ್ಪತ್ತು ವರ್ಷಗಳಿಂದ ಈ ರಸ್ತೆಯನ್ನು ಮಾಡಿರಲಿಲ್ಲ, ಆದರೆ ಅವರ ಪ್ರಯತ್ನದಿಂದಾಗಿ ರಸ್ತೆಯನ್ನು ಡಾಂಬರೀಕರಣ ಮಾಡಲಾಗುತ್ತಿದೆ. ಹಿಂದಿನ ಸರ್ಕಾರ ರಸ್ತೆ ಕೆಲಸಕ್ಕೆ ವಿಳಂಬ ಮಾಡಿತು ಪ್ರಸ್ತುತ ಕಾಂಗ್ರೆಸ್ ಸರ್ಕಾರ ರಸ್ತೆಗಳು ಮತ್ತು ಇತರ ಅಗತ್ಯ ಸೇವೆಗಳಿಗೆ ಆದ್ಯತೆ ನೀಡಿದೆ.ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ವಿನಾಯಕ ಬಾಗಡಿ , ಗ್ರಾ.ಪಂ.ಮಾಜಿ ಅಧ್ಯಕ್ಷ ಭಾರತ್ ಮಾನೆ, ಗುತ್ತಿಗೆದಾರ ರಾಜು ಅಲ್ಬಾಳ್, ಅಣ್ಣಾಸಾಹೇಬ ಮಾನೆ, ವಿಜಯ ವಾಘಮಾರೆ, ಶಂಕರ್, ಆವಘಡೇ ಮಲ್ಲಿಕಾರ್ಜುನ್, ಮಗದುಮ ಗೂಳಪ್ಪನವರು,ಸಮಸ್ತ ಕಾರ್ಯಕರ್ತರು ಉಪಸ್ಥಿತರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 