ಈ ವಾರ ರಾಜ್ಯಾದ್ಯಂತ ಹೆಚ್ಚಿನ ಮಳೆ : ರೆಡ್ಡಿ
ಬೆಂಗಳೂರು, ಜೂನ್ 7, ರಾಜ್ಯಾದ್ಯಂತ ಈ ವಾರ ಹೆಚ್ಚಿನ ಮಳೆಯಾಗಲಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಕೇಂದ್ರದ ಉಸ್ತುವಾರಿ ನಿರ್ದೇಶಕ ಶ್ರೀನಿವಾಸ ರೆಡ್ಡಿ ಹೇಳಿದ್ದಾರೆ.ಈ ಕುರಿತು ಮಾತನಾಡಿದ ಅವರು, ಮುಂಗಾರು ಎಂದಿನಂತೆ, ವಾಡಿಕೆಯಂತೆ ಜೂನ್ 1 ರಂದು ಕೇರಳ ರಾಜ್ಯವನ್ನು ಪ್ರವೇಶ ಮಾಡಿದೆ. ಆದರೆ ಮುಂಗಾರು ದುರ್ಬಲವಾದ ಕಾರಣ ರಾಜ್ಯಕ್ಕೆ ಬರುವುದು ಸ್ವಲ್ಪ ವಿಳಂಬವಾಗಿತ್ತು. ಕರಾವಳಿ, ದಕ್ಷಿಣ ಒಳನಾಡು, ಮಲೆನಾಡು ಪ್ರದೇಶಕ್ಕೆ ಇದೇ 4 ಮತ್ತು 5 ರಂದು ಮುಂಗಾರು ಆಗಮನವಾಗಿದ್ದು ಅನೇಕ ಕಡೆ ಮಳೆಯಾಗಿದೆ.ಆದರೆ ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಕಾಣಿಸಿಕೊಂಡ ವಾಯುಭಾರ ಕುಸಿತದಿಂದ ಇದೆ 10 - 12 ರ ವೇಳೆಗೆ ಮುಂಗಾರು ರಾಜ್ಯದ ಎಲ್ಲಾ ಭಾಗಗಳಿಗೆ ಆವರಿಸಲಿದ್ದು ಪರಿಣಾಮ ಈ ವಾರ ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಹೆಚ್ಚಿನ ಮಳೆಯಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ 