ಮಹಾದಾಸೋಹದಲ್ಲಿ ಇಂದು ಭಕ್ತರಿಗೆ 18 ಲಕ್ಷಕ್ಕಿಂತಲೂ ಹೆಚ್ಚು ಬಿಸಿ ಬಿಸಿ ಮಿರ್ಚಿಗಳು
ಲೋಕದರ್ಶನ ವರದಿ
ಕೊಪ್ಪಳ 13: ಗವಿಮಠದ ಜಾತ್ರೆಯ ವಿಶೇಷತೆಗಳಲ್ಲೊಂದಾದ ಮಹಾದಾಸೋಹದಲ್ಲಿ ಇಂದು ಮಹಾರಥೋತ್ಸವದ ಎರಡನೇ ದಿನ ಲಕ್ಷ -ಲಕ್ಷ ಭಕ್ತರಿಗೆ ಉತ್ತರ ಕರ್ನಾಟಕ ಶೈಲಿಯ ರೊಟ್ಟಿ, ಚಪಾತಿ, ಪಲ್ಲೆ, ಮಾದಲಿ, ಹಾಲು, ತುಪ್ಪ, ಅನ್ನಾ, ಸಾಂಬಾರ್, ಚಟ್ನಿಪುಡಿ, ಮಜ್ಜಿಗೆ ಇವುಗಳ ಜೊತೆಗೆ ಬಿಸಿ ಬಿಸಿಯಾದ ಮಿರ್ಚಿಯನ್ನು ವಿತರಿಲಾಯಿತು. ಕಳೆದ 5 ವರ್ಷಗಳಿಂದಲೂ ಮಹಾದಾಸೋಹದಲ್ಲಿ ಮಿರ್ಚಿಗಳನ್ನು ನೀಡಲಾಗುತ್ತಿದೆ. ಮೊದಲಿಗೆ ಕೊಪ್ಪಳದ ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿಯ ಗೆಳೆಯರ ಬಳಗವು ಈ ಸೇವೆಗೈಯುತ್ತಿತ್ತು. ಈ ಸಲ ಗವಿಮಠವೇ ವಹಿಸಿಕೊಂಡಿದೆ. 18 ಕ್ವಿಂಟಾಲ್ ಕಡ್ಲಿಬೇಳೆ ಹಿಟ್ಟು, 15 ಕ್ವಿಂಟಾಲ್ ಹಸೆಮೆಣಸಿನಕಾಯಿ, 10 ಬ್ಯಾರಲ್ ಎಣ್ಣೆ ಅಲ್ಲದೇ ಜೀರಗಿ, ಅಡುಗೆ ಸೋಡಾ, ಇನ್ನಿತರ ವಸ್ತುಗಳನ್ನು ಬಳಸಿಕೊಂಡು ಮುಂಜಾನೆಯಿಂದ 300 ಕ್ಕಿಂತಲೂ ಹೆಚ್ಚೂ ಜನ ಬಾಣಸಿಗರು,ಸ್ವಯಂ ಸೇವಕರು ಬಸಿ ಬಿಸಿ ಮಿರ್ಚಿಗಳನ್ನು ತಯಾರಿಸುವಂತಹ ಹಾಗೂ ವಿತರಿಸುವಂತಹ ಕೆಲಸದಲ್ಲಿ ಬೆಳಗಿನಿಂದ ರಾತ್ರಿಯವರೆಗೆ ನಿರತರಾಗಿದ್ದಾರೆ. ಇಂದು ಭಕ್ತರಿಗೆ 18 ಲಕ್ಷಕ್ಕಿಂತಲೂ ಹೆಚ್ಚೂ ಮಿರ್ಚಿಗಳು ತಯಾರಾಗುತ್ತಿವೆ. ಭಕ್ತರಿಗೆ ಪ್ರಸಾದದಲ್ಲಿ ಮಿರ್ಚಿಗಳನ್ನು ಒದಗಿಸುವ ಸಂಕಲ್ಪವನ್ನು ಪೂಜ್ಯರು ಮಾಡಿದ್ದರಿಂದ ಪ್ರತಿವರ್ಷ ಮಾದಾಸೋಹದಲ್ಲಿ ಭಕ್ತರಿಗೆ ಮಿರ್ಚಿಗಳನ್ನು ನೀಡಲಾಗುತ್ತಿದೆ.
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್ 