ಕ್ವಾರಂಟೈನ್ನಿಂದ ತಪ್ಪಿಸಿಕೊಳ್ಳಲು ತಾಯಿ-ಮಗಳ ಪರಾರಿ ಯತ್ನ
ಬೆಂಗಳೂರು, ಮೇ 26, ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ನಂತರ ತಾಯಿ-ಮಗಳೊಬ್ಬಳು ಕ್ವಾರಂಟೈನ್ನಿಂದ ತಪ್ಪಿಸಿಕೊಳ್ಳಲು ಪರಾರಿಯಾಗಲು ಯತ್ನಿಸಿದ ಘಟನೆ ಇಂದು ನಡೆದಿದೆ.ದೆಹಲಿಯಿಂದ ಬಂದ ವಿಮಾನದಿಂದ ತಾಯಿ ಮಗಳು ಇಳಿದಿದ್ದಾರೆ. ವಿಮಾನ ನಿಲ್ದಾಣದಲ್ಲಿ ಸಾಕಷ್ಟು ಬಿಗಿ ಭದ್ರತೆ ಒದಗಿಸಲಾಗಿದ್ದು, ಇದರ ನಡುವೆಯೇ ತಾಯಿ ಮಗಳು ಪರಾರಿಯಾಗಲು ಯತ್ನಿಸಿ ಸಿಕ್ಕಿ ಬಿದ್ದಿದ್ದಾರೆ.ಕ್ವಾರೆಂಟೈನ್ ನಿಂದ ತಪ್ಪಿಸಿಕೊಂಡು ಕಾರಿನಲ್ಲಿ ತಪ್ಪಿಸಿಕೊಳ್ಳಲು ತಾಯಿ ಮಗಳು ಮುಂದಾಗಿದ್ದಾರೆ. ಅವರ ಕೈಯಲ್ಲಿ ರೆಡ್ ಝೊನ್ ಎಂಬ ಮುದ್ರೆ ಕೂಡ ಇತ್ತು.
ದೇವನಹಳ್ಳಿ ವಿಮಾನ ನಿಲ್ದಾಣದಿಂದ ಕಾರಿನಲ್ಲಿ ಬೆಂಗಳೂರು ನಗರಕ್ಕೆ ಹೋಗಲು ಮುಂದಾಗಿದ್ದಾರೆ. ಸಿ ಎಸ್ ಸಿ ( ಸಾಮಾನ್ಯ ಸೇವಾ ಕೇಂದ್ರ) ತಂಡದಿಂದ ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದ್ದು, ಅವರನ್ನು ಪೊಲೀಸರಿಗೆ ಒಪ್ಪಿಸಲಾಗಿದೆ.ತಾಯಿ ಮಗಳನ್ನು ತರಾಟೆಗೆ ತೆಗೆದುಕೊಂಡ ನಂತರ ಕ್ವಾರೆಂಟೈನ್ ಗೆ ಒಪ್ಪಿಗೆ ಸೂಚಿಸಿದರು. ಬಳಿಕ ಅವರನ್ನು ಕ್ವಾರಂಟೈನ್ಗೆ ಕಳುಹಿಸಲಾಗಿದೆ. ಅವರಿಬ್ಬರೂ ಕಾರಿನಲ್ಲಿ ಕುಳಿತಿದ್ದರಿಂದ ಕಾರಿಗೆ ರಾಸಾಯನಿಕ ಸಿಂಪಡಣೆ ಮಾಡಲಾಗಿದೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 