ತಾಯಂದಿರ ದಿನ: ಸಚಿವ ಸೋಮಶೇಖರ್ ಶುಭಾಶಯ
ಬೆಂಗಳೂರು, ಮೇ 10,ವಿಶ್ವ ತಾಯಂದಿರ ದಿನಾಚರಣೆಗೆ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಶುಭಾಶಯ ಕೋರಿದ್ದಾರೆ.ಬಸಿರಿನಲ್ಲಿ ನವ ಮಾಸಗಳು ಹೊತ್ತು, ಉಸಿರಿತ್ತು ಜನ್ಮ ನೀಡಿ, ತುತ್ತಿಟ್ಟು ಮುತ್ತಿಟ್ಟು, ಹೆಸರಿಟ್ಟು ಜಗಕೆ ತೋರಿಸಿ, ಗರಿಗೆದರುವ ಮುನ್ನ ಜನ್ಮದಾತನು ಮರೆಯಾದರೂ, ಮಕ್ಕಳಿಗಾಗಿ ನೋವ ನುಂಗಿ, ನಮ್ಮ ಓರೆ, ಕೋರೆಗಳ ದೂರಮಾಡಿ, ಬಾಳಿನ ನಾಳೆಯ ಕನಸುಗಳ ಗರಿ ಮೂಡಿಸಿ ತಿದ್ದಿ ತೀಡಿ ಸವಿ ಸಂಗೋಪನೆಯಲಿ ಸಲಹಿ, ನಾವು ಬದುಕಿನ ಏಳಿಗೆಯ ಬೆಟ್ಟ ಹತ್ತಲು ಬೆನ್ನಿಗೆ ನಿಂತು, ಶಿಖರವೇರಿದ ಕರುಳ
ಕುಡಿಯ ಕಂಡು ಹಿರಿ ಹಿರಿ ಹಿಗ್ಗಿ ಸಗ್ಗದ ಸುಖವ ಕಂಡ ಜನ್ಮದಾತೆ, ಪ್ರೀತಿಯಿಂದ ಪೊರೆದಾತೆ ನೀನು. ನನಗೆ ಇಂದಿಗೂ ಆಶ್ಚರ್ಯವಾಗುವ ಸಂಗತಿಯೆಂದರೆ ನಿನ್ನಲ್ಲಿರುವ ಮಾಸದ ಚೈತನ್ಯ, ಚುರುಕುತನ. ಇದೇ ನನಗೆ ಈ ಸಂದರ್ಭದಲ್ಲಿ ಸ್ಫೂರ್ತಿಯಾಗಿದೆ. ನಿನ್ನ ಮಾದರಿಯಲ್ಲೇ ನಾನಿಂದು ಕಾರ್ಯನಿರ್ವಹಿಸಲು ಪ್ರಯತ್ನಿಸುತ್ತಿದ್ದೇನೆ. ನನ್ನ ಸರ್ವಸ್ವವೂ ನೀನಾಗಿರುವ ಪ್ರೀತಿಯ ಅಮ್ಮನಿಗೆ ಜಾಗತಿಕ ಜನ್ಮದಾತೆಯರ ದಿನದ ಪ್ರೀತಿಯ ಹೃದಯಂಗಮ ಪ್ರಣಾಮಗಳು.ಇಂದಿನ ಯುವ ಪೀಳಿಗೆಗೆ ನನ್ನ ಮನವಿ ಬದುಕಿನಲ್ಲಿ ಎಷ್ಟೇ ಎತ್ತರಕ್ಕೆ ಏರಿದರೂ ಹೆತ್ತವರನ್ನು ಮರೆಯದೇ ಪೊರೆಯುವುದು ಪರಮಧರ್ಮವಲ್ಲವೇ. ತಂದೆ -ತಾಯಿಗಳಿಗಿಂತ ಬಂಧುಗಳಿಲ್ಲ. ಉಪ್ಪಿಗಿಂತ ರುಚಿ ಬೇರಿಲ್ಲ. ಈ ನಿಟ್ಟಿನಲ್ಲಿ ಹೆತ್ತವರನ್ನು ಗೌರವಿಸಿ, ಚೆನ್ನಾಗಿ ನೋಡಿಕೊಳ್ಳಿ ಎಂದು ಅವರು ಸಂದೇಶದಲ್ಲಿ ತಿಳಿಸಿದ್ದಾರೆ.
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ 