ಪಾಕಿಸ್ತಾನದಿಂದ ಮೋಟಾರ್ ಶೆಲ್ ದಾಳಿ : ಸೇನೆಯ ತಕ್ಕ ಪ್ರತ್ಯುತ್ತರ
ಜಮ್ಮು, ಅ 15: ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಅಪ್ರಚೋದಿತ ಮೋಟಾರ್ ಶೆಲ್ ದಾಳಿ ಮಾಡಿ ಪಾಕಿಸ್ತಾನಿ ಪಡೆಗಳು ಮಂಗಳವಾರ ಕದನವಿರಾಮ ಉಲ್ಲಂಘಿಸಿವೆ. ಪೂಂಚ್ ಜಿಲ್ಲೆಯ ಕ್ವಾಸ್ಬಾ ಮತ್ತು ಕಿನರ್ಿ ವಲಯಗಳಲ್ಲಿ ಬೆಳಗ್ಗೆ 9.30 ರ ಸುಮಾರಿಗೆ ಈ ದಾಳಿ ನಡೆದಿದ್ದು ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ. ಅ 11 ರಂದು ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ನಡೆದ ಅಪ್ರಚೋದಿತ ದಾಳಿಯಲ್ಲಿ ಗಾಯಗೊಂಡಿದ್ದ ಸೇನಾ ಯೋಧ ನಂತರ ಹುತಾತ್ಮರಾಗಿದ್ದಾಗಿ ಅವರು ಮಾಹಿತಿ ನೀಡಿದ್ದಾರೆ. ಅ 12 ರಂದು ಸಹ ಪಾಕಿಸ್ತಾನ ಪೂಂಚ್ ಜಿಲ್ಲೆಯ ದೇಗ್ವಾರ್ ಪ್ರದೇಶದಲ್ಲಿ ಅಪ್ರಚೋದಿತ ದಾಳಿ ನಡೆಸಿದೆ. ಅ 3 ರಂದು ಜಮ್ಮು ಕಾಶ್ಮೀರದ ಕಥುವಾ ಮತ್ತು ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಮತ್ತು ಅಂತಾರಾಷ್ಟ್ರೀಯ ಗಡಿ ಬಳಿಯ ಗ್ರಾಮಗಳನ್ನು ಗುರಿಯಾಗಿಸಿ ಪಾಕಿಸ್ತಾನ ಪಡೆಗಳು ಅಪ್ರಚೋದಿತ ದಾಳಿ ನಡೆಸಿದ್ದವು. ಭಾರತೀಯ ಸೇನೆ ಮತ್ತು ಗಡಿ ಭದ್ರಾ ಪಡೆ ತಕ್ಕ ಪ್ರತ್ಯುತ್ತರ ನೀಡಿವೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 