ಮಹಾವೀರ ಜಯಂತಿ: ಶುಭ ಕೋರಿದ ರಾಷ್ಟ್ರಪತಿ, ಪ್ರಧಾನಿ
ನವದೆಹಲಿ, ಏ 17 ಮಹಾವೀರ ಜಯಂತಿ ಅಂಗವಾಗಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಶುಭ ಹಾರೈಸಿದ್ದಾರೆ.
ದೇಶದ ಜನತೆಗೆ ಅದರಲ್ಲೂ ವಿಶೇಷವಾಗಿ ಜೈನ ಸಮುದಾಯಕ್ಕೆ ಶುಭ ಕೋರುತ್ತೇನೆ. ಭಗವಾನ್ ಮಹಾವೀರರ ಶಾಂತಿ ಹಾಗೂ ಅಹಿಂಸಾ ಸಂದೇಶ ಮಹತ್ವದ್ದಾಗಿದೆ. ಅವರ ಜೀವನದಿಂದ ಸ್ಫೂತರ್ಿ ಪಡೆದು ಎಲ್ಲೆಡೆ ಸೋದರ ಬಾಂಧವ್ಯವನ್ನು ಹಂಚಿಕೊಳ್ಳೋಣ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಟ್ವೀಟ್ ಮಾಡಿದ್ದಾರೆ. ಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು, ಭಗವಾನ್ ಮಹಾವೀರರ ಅಹಿಂಸಾ ಸಂದೇಶ, ಸತ್ಯ, ಸದಾಚಾರ ಮತ್ತು ಪ್ರಾಮಾಣಿಕತೆಯ ಮಾರ್ಗ ಅನುಸರಣಾ ಯೋಗ್ಯ ಎಂದು ಟ್ವಿಟರ್ ನಲ್ಲಿ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಮಹಾವೀರ ಜಯಂತಿಯಂದು ದೇಶದ ಜನತೆಗೆ ಅವರ ಆಶೀವರ್ಾದ ಲಭಿಸಲಿ. ಅವರ ಶಾಂತಿ, ಸೌಹಾರ್ದತೆ, ಸಹೋದರತೆ ಮತ್ತು ಅಹಿಂಸೆಯ ಸಂದೇಶ ಸರ್ವಕಾಲಕ್ಕೂ ಪ್ರಸ್ತುತ ಎಂದು ಟ್ವೀಟ್ ಸಂದೇಶದಲ್ಲಿ ತಿಳಿಸಿದ್ದಾರೆ. ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್, ನಾಗರಿಕ ವಿಮಾನಯಾನ ಖಾತೆ ಸಚಿವ ಸುರೇಶ್ ಪ್ರಭು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮೊದಲಾದವರು ಮಹಾವೀರ ಜಯಂತಿ ಅಂಗವಾಗಿ ದೇಶದ ಜನತೆಗೆ ಶುಭ ಕೋರಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 