ಮುದ್ದೇಬಿಹಾಳ: 'ಯಡಿಯೂರಪ್ಪ ಸಂತ್ರಸ್ತರ ನೋವು ಆಲಿಸಲಿಲ್ಲಾ'
ಮುದ್ದೇಬಿಹಾಳ 14: ಕೆಲ ದಿನಗಳ ಹಿಂದೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮುದ್ದೇಬಿಹಾಳಕ್ಕೆ ಆಗಮಿಸಿದ್ದರು. ಆದರೆ ಅವರು ತಮ್ಮದೇ ಪಕ್ಷದ ಸ್ಥಳೀಯ ಶಾಸಕರ ಮನೆಗೆ ಬಂದಿದ್ದರೇ ಹೊರತು ಪ್ರವಾಹದಿಂದ ಸಂಕಷ್ಟಕ್ಕೀಡಾಗಿರುವ ಸಂತ್ರಸ್ತರ ನೋವು ಆಲಿಸಲು ಬಂದಿರಲಿಲ್ಲ ಎಂದು ರಾಜ್ಯ ಜೆಡಿಎಸ್ ಮಹಿಳಾ ಕಾಯರ್ಾಧ್ಯಕ್ಷೆ ಮಂಗಳಾದೇವಿ ಬಿರಾದಾರ ಟೀಕಿಸಿದ್ದಾರೆ.
ಪಕ್ಷದ ಸಂಘಟನಾ ಸಭೆಗೂ ಮುನ್ನ ತಮ್ಮ ಲಕ್ಷ್ಮೀ ನಿವಾಸದಲ್ಲಿ ಸಂಜೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರವಾಹ ಪರಿಸ್ಥಿತಿ ಅವಲೋಕನ ಪ್ರವಾಸ ಎಂದಿದ್ದರೂ ಅವರು ಇಲ್ಲಿನ ನೆರೆಪೀಡಿತ ಒಂದೇ ಒಂದು ಗ್ರಾಮಕ್ಕೂ ಭೇಟಿ ನೀಡುವ ಕೆಲಸ ಮಾಡಲಿಲ್ಲ. ಇದು ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದವರಿಗೆ ಶೋಭೆ ತರುವಂಥದ್ದಲ್ಲ. ಸ್ಥಳೀಯ ಶಾಸಕರೂ ಈ ಬಗ್ಗೆ ಉದಾಸೀನತೆ ತೋರಿಸಿದರು. ಚುನಾವಣೆ ಮುಗಿದ ಮೇಲೆ ಮತದಾರರನ್ನು ಮರೆಯುವುದು ಜನಪ್ರತಿನಿಧಿಯಾದವರಿಗೆ ಸರಿ ಕಾಣುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಧುರೀಣರಾದ ಎಂ.ಎಚ್.ಹಾಲಣ್ಣವರ್ ವಕೀಲರು, ಜಿಲಾನಿ ಮುದ್ನಾಳ, ಅರ್ಶದ್ ಮೋಮಿನ್, ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆ ಕೌಸರಬಾನು ಬಿದರಕುಂದಿ, ಪ್ರಭುಗೌಡ ಪಾಟೀಲ, ಅರವಿಂದ ಕಾಶಿನಕುಂಟಿ, ಭೀಮನಗೌಡ ಕೊಡಗಾನೂರ, ಬಸವರಾಜ ಸಂಕನಾಳ, ಚಂದ್ರಶೇಖರ ಗೋನಾಳ, ಬಿ.ಎಚ್.ಹಾಲಣ್ಣವರ್, ಶಿವನಗೌಡ ಬಿರಾದಾರ, ದ್ಯಾಮನಗೌಡ ಪಾಟೀಲ ಸೇರಿದಂತೆ ಹಲವರು ಇದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 