ಮುದ್ದೇಬಿಹಾಳ: ಮರ ಬಿದ್ದು ಸಂಚಾರಕ್ಕೆ ಅಡ್ಡಿ , ಬೈಕ್ ಮೇಲಿದ್ದ ದಂಪತಿ ಪಾರು
ಮುದ್ದೇಬಿಹಾಳ 03: ಪಟ್ಟಣದ ವಿಜಯಪುರ ರಸ್ತೆಯಲ್ಲಿ (ಅಂಜುಮನ್ ಶಾಲೆಯ ಎದುರು) ಇದ್ದ ಗುಲ್ಲಮೋಹರ್ ಮರವೊಂದು ಹಠಾತ್ ಧರೆಗುರಳಿದ ಘಟನೆ ಸೋಮವಾರ ಸಂಜೆ ನಡೆಯಿತು. ಘಟನೆಯಲ್ಲಿ ಅದೇ ರಸ್ತೆಯಲ್ಲಿ ಬೈಕ್ ಮೇಲೆ ಹೋಗುತ್ತಿದ್ದ ಕುಂಬಾರ ಎನ್ನುವ ದಂಪತಿ ಮೇಲೆ ಬಿದ್ದಿತಾದರೂ ಅದೃಷ್ಟವಶಾತ್ ಅವರಿಗೆ ಸಣ್ಣಪುಟ್ಟ ಗಾಯಗಳಾದವು. ಆದರೆ ಮರ ಅಲ್ಲಿಯೇ ಇದ್ದ ವಿದ್ಯುತ್ ತಂತಿಗಳ ಮೇಲೆ ಬಿದ್ದಿದ್ದರಿಂದ ಭಾರೀ ಅನಾಹುತವಾಗುವ ಸಾಧ್ಯತೆ ಇತ್ತು. ಅದೇ ರಸ್ತೆಯಲ್ಲಿ ಹೊರಟಿದ್ದ ಢವಳಗಿಯ ವಿನೋದಗೌಡ ಕೊಣ್ಣೂರ ಕೂಡಲೇ ಹೆಸ್ಕಾಂ ಅಧಿಕಾರಿ ಬಿ.ಎಸ್.ಯಲಗೋಡ ಅವರನ್ನು ಸಂಪರ್ಕಿಸಿ, ವಿದ್ಯುತ್ ಪ್ರಸರಣ ನಿಲ್ಲುವಂತೆ ಮಾಡಿದರು. ನಂತರ ಅಲ್ಲಿದ್ದ ಗ್ಯಾರೇಜ್ ಮಾಲೀಕ ಶಬ್ಬೀರ ಮತ್ತಿತರರು ಬೈಕ್ ಮೇಲಿದ್ದ ಕುಂಬಾರ ದಂಪತಿಗಳನ್ನು ಉಪಚರಿಸಿ ಕಳಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 