ಮುದ್ದೇಬಿಹಾಳ: ಥ್ರೀ ಡಿ ಭಾವಚಿತ್ರ ಕಾಣಿಕೆ ನೀಡಿ ಗಮನಸೇಳೆದ ನಡಹಳ್ಳಿ
ಲೋಕದರ್ಶನ ವರದಿ
ಮುದ್ದೇಬಿಹಾಳ 06: ಇಲ್ಲಿನ ಆಯುಷ್ ವೈದ್ಯ ಹಾಗೂ ಹವ್ಯಾಸಿ ಚಿತ್ರಕಲಾವಿದ ಡಾ.ಎಂ.ಎಂ.ಅಥಣಿ ಅವರು ಸ್ವತಃ ತಾವೇ ಥ್ರೀ ಡಿ ಟೆಕ್ನಾಲಜಿ ಬಳಸಿ ರಚಿಸಿರುವ ಭಾವಚಿತ್ರವನ್ನು ಇಲ್ಲಿನ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಅವರ ದಾಸೋಹ ನಿಲಯಕ್ಕೆ ಶನಿವಾರ ಭೇಟಿ ನೀಡಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕಾಣಿಕೆಯಾಗಿ ನೀಡಿ ಗಮನಸೆಳೆದಿದ್ದಾರೆ.
ಈ ಫೋಟೊ ನೇರವಾಗಿ ನೋಡಿದರೆ ಯಡಿಯೂರಪ್ಪ ಅವರು ನಗುಮುಖದಿಂದ ಕೈಮುಗಿದು ನಿಂತಿರುವ, ಎಡಭಾಗಕ್ಕೆ ಹೊರಳಿಸಿದರೆ ಪ್ರಧಾನಿ ನರೇಂದ್ರ ಮೋದಿ ಅವರು ನಸು ನಗುತ್ತಿರುವ, ಬಲಭಾಗಕ್ಕೆ ಹೊರಳಿಸಿದರೆ ಬಿಜೆಪಿ ರಾಷ್ಟ್ರಾಧ್ಯಕ್ಷ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ನಸುನಗುತ್ತಿರುವ ಚಿತ್ರಗಳು ಕಂಡು ಬರುತ್ತವೆ. ಭಾವಚಿತ್ರವನ್ನು ಪಡೆದು ಅದನ್ನು ತಿರುಗಿಸಿ ನೋಡಿ ಖುಷಿ ಪಟ್ಟ ಯಡಿಯೂರಪ್ಪ ಅವರು ಇದು ವಿಶೇಷವಾಗಿದೆ. ಡಾ.ಅಥಣಿ ಅವರು ತಮ್ಮ ವೈದ್ಯಕೀಯ ವೃತ್ತಿ ಜೊತೆಗೆ ವಿಶಿಷ್ಟ ಚಿತ್ರಕಲೆ ಆಸಕ್ತಿ ಸ್ಪೂತರ್ಿದಾಯ ಎಂದು ಮೆಚ್ಚುಗೆ ಸೂಚಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ, ಶಾಸಕರಾದ ಎ.ಎಸ್.ಪಾಟೀಲ ನಡಹಳ್ಳಿ, ರಾಜೂಗೌಡ ನಾಯಕ, ದೊಡ್ಡನಗೌಡ ಪಾಟೀಲ, ಬಬಲೇಶ್ವರದ ಬಿಜೆಪಿ ಧುರೀಣ ವಿಜುಗೌಡ ಪಾಟೀಲ, ಹಸಿರು ತೋರಣ ಗೆಳೆಯರ ಬಳಗದ ಅಧ್ಯಕ್ಷ ನಾಗಭೂಷಣ ನಾವದಗಿ, ಆಯುಷ್ ವೈದ್ಯರ ಸಂಘದ ಪದಾಧಿಕಾರಿ ಡಾ.ವೀರೇಶ ಪಾಟೀಲ, ಸ್ಥಳೀಯ ಬಿಜೆಪಿ ಧುರೀಣರು ಇದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 