ಮುದ್ದೇಬಿಹಾಳ: ಕುಸಿದು ಬಿದ್ದ ಕಾಲುವೆ: ಪರಿಶೀಲನೆ
ಮುದ್ದೇಬಿಹಾಳ 20: ತಾಲೂಕಿನ ಸರೂರ, ಕವಡಿಮಟ್ಟಿ, ನೆರಬೆಂಚಿ ಗ್ರಾಮದ ಭಾಗದಲ್ಲಿ ಹಾಯ್ದು ಹೋಗಿರುವ ಕಾಲುವೆ ಕಾಮಗಾರಿ ಕಳಪೆಮಟ್ಟದಿಂದ ಕೂಡಿದ್ದು, ಕೂಡಲೇ ದುರಸ್ತಿಗೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಸರೂರ ಗ್ರಾಮಸ್ಥರು ಆಗ್ರಹಿಸಿದರು.
ತಾಲೂಕಿನ ಸರೂರ, ಕವಡಿಮಟ್ಟಿ ಹಾಗೂ ನೆರಬೆಂಚಿ ಗ್ರಾಮಗಳ ವ್ಯಾಪ್ತಿಯಲ್ಲಿ ನಿಮರ್ಿಸಿರುವ ಕಾಲುವೆ ಜಾಲಕ್ಕೆ ಇತ್ತೀಚೆಗೆ ಕೆಬಿಜೆಎನ್ಎಲ್ ಅಧಿಕಾರಿಗಳೊಂದಿಗೆ ಗ್ರಾಮಸ್ಥರು ಭೇಟಿ ನೀಡಿದ್ದ ವೇಳೆ ಕಾಲುವೆ ಸ್ಥಿತಿಗತಿ ಕುರಿತು ಪರಿಶೀಲಿಸಿದರು.
ಗ್ರಾಪಂ ಸದಸ್ಯ ಶ್ರೀಶೈಲ ಹೂಗಾರ ಅವರು ಕೆಬಿಜೆಎನ್ಎಲ್ ಅಧಿಕಾರಿ ದೊಡಮನಿ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡರಲ್ಲದೆ, ರೈತರು ಅನುಭವಿಸುತ್ತಿರುವ ಕಷ್ಟ ಕಣ್ಣಾರೆ ಕಂಡು ರೈತರ ಹೊಲಗಳಲ್ಲಿ ಹಾದು ಹೋದ ದೊಡ್ಡ ಕಾಲುವೆ ಹಾಗೂ ಸಣ್ಣ ಕಾಲುವೆಗಳ ಕಾಮಗಾರಿ ಕಳಪೆಯಾಗಿ ನಿಮರ್ಿಸಿದ್ದರಿಂದ ಸಂಪರ್ಕ ಸೇತುವೆ ಕುಸಿದಿವೆ. ಇದರಿಂದ ರೈತರು ತಮ್ಮ ಹೊಲಗಳಿಗೆ ಹೋಗಲು ಸಾಧ್ಯವಾಗುತ್ತಿಲ್ಲ. ಎರಡ್ಮೂರು ವರ್ಷವಾದರೂ ನೀವು ಸ್ವಲ್ಪವೂ ತಿರುಗಿ ನೋಡುವುದಿಲ್ಲವೆಂದರೆ ಹೇಗೆ? ಎಂದು ಪ್ರಶ್ನಿಸಿದರು.
ಕಾಲುವೆ ಜಾಲದಲ್ಲಿ ಅಲ್ಲಲ್ಲಿ ಬಿರುಕು ಬಿದ್ದಿದ್ದು, ಜೋರಾಗಿ ನೀರು ಹರಿಸಿದರೆ ಕಾಲುವೆ ಒಡೆಯುವ ಭೀತಿ ಇದೆ. ಕಾಲುವೆಯ ಕೊನೆಯವರೆಗೂ ನೀರಿನ ಹರಿವು ಸಾಧ್ಯವಾಗುವುದೇ ಇಲ್ಲ. ರೈತರಿಗೆ ನೀರು ಹೇಗೆ ಸಿಗುತ್ತದೆ ಎಂದು ಪ್ರಶ್ನಿಸಿದರು. ಒಂದು ವೇಳೆ ಕೂಡಲೇ ದುರಸ್ತಿಗೆ ಕ್ರಮ ಜರುಗಿಸದಿದ್ದರೆ ಉಗ್ರ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 