ಮುದ್ದೇಬಿಹಾಳ: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ನೌಕರರ ಪ್ರತಿಭಟನೆ
ಲೋಕದರ್ಶನ ವರದಿ
ಮುದ್ದೇಬಿಹಾಳ 05: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಕನರ್ಾಟಕ ರಾಜ್ಯ ಅಂಗನವಾಡಿ ಕಾರ್ಯಕತರ್ೆ ಹಾಗೂ ಸಹಾಯಕಿಯರ ಸೇವಾ ಸಂಘದ ನೇತೃತ್ವದಲ್ಲಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದ ಅಂಗನವಾಡಿ ನೌಕರರು ತಹಸೀಲ್ದಾರ್ ಹಾಗೂ ತಾಪಂ ಇಒಗೆ ಮನವಿ ಸಲ್ಲಿಸಿದರು.
ಸಂಘಟನೆ ರಾಜ್ಯಾಧ್ಯಕ್ಷೆ ನೀಲಮ್ಮ ಬೋರಾವತ್ ಮಾತನಾಡಿ, ಅಂಗನವಾಡಿ ಬಾಡಿಗೆ ಕೊಟ್ಟಿರುವ ಬಾಡಿಗೆಯನ್ನು ಕಳೆದೆರಡು ವರ್ಷದಿಂದ ಪಾವತಿಸಿಲ್ಲ. ಕೆಲವು ಮೇಲ್ವಿಚಾರಕಿಯರು ಕಟ್ಟಿಗೆಯ ಹಣದಲ್ಲಿ ಸಹಾಯಕಿಯರಿಂದ 400-500 ರೂ. ವಸೂಲಿ ಮಾಡುತ್ತಿದ್ದು, ಇದನ್ನು ತಡೆಗಟ್ಟಲು ಇಲಾಖೆಯ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ದೂರಿದರು.
ಕೆಲ ಮೇಲ್ವಿಚಾರಕಿಯರು ಸಿಡಿಪಿಒ ಕಚೇರಿಯಲ್ಲಿ ಫೈಲು ಮಾಡುವುದಾಗಿ ಹೇಳಿ ಸಹಾಯಕಿಯರಿಂದ 1000 ರೂ. ಪಡೆದುಕೊಳ್ಳುತ್ತಿದ್ದಾರೆ. ಅಂತಹ ಮೇಲ್ವಿಚಾರಕಿಯರು ಯಾವ ಫೆಲ್ಗಾಗಿ ಹಣ ಪಡೆದಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಬೇಕು ಸೇರಿ ಒಂಭತ್ತು ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ತಹಸೀಲ್ದಾರ್ ವಿನಯಕುಮಾರ ಪಾಟೀಲರಿಗೆ ಮನವಿ ಸಲ್ಲಿಸಿದರು.
ಎಂ.ಬಿ. ಬಾಗಲಕೋಟ, ಎಸ್.ಎಸ್. ಕಾಖಂಡಕಿ, ಎಸ್.ಎಂ. ಅಂಗಡಗೇರಿ, ಅಯ್ಯಮ್ಮ ವಣಕಿಹಾಳ, ಹುಲಿಗಮ್ಮ ಕಂದಗಲ್ಲ,ನಾಗಮ್ಮ ನಾಟೀಕಾರ, ಚಂದ್ರಕಲಾ ಜೋಷಿ, ಸರೋಜಾ ನಾಯ್ಕೋಡಿ, ಗುರುಬಾಯಿ ಲಮಾಣಿ, ಯಮನಕ್ಕ ವಡ್ಡರ ಮತ್ತಿತರರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 