ಮುದ್ದೇಬಿಹಾಳ: ಕೃಷ್ಣಾ ನದಿಗೆ ಹೆಚ್ಚಿನ ನೀರು ಬಿಡುಗಡೆ
ಲೋಕದರ್ಶನ ವರದಿ
ಮುದ್ದೇಬಿಹಾಳ 25: ಆಲಮಟ್ಟಿ ಜಲಾಶಯದಿಂದ ಕೃಷ್ಣಾ ನದಿಗೆ ಹೆಚ್ಚಿನ ನೀರು ಬಿಟ್ಟಿದ್ದರಿಂದಾಗಿ ತಂಗಡಗಿಯಿಂದ ಕಮಲದಿನ್ನಿ, ಕುಂಚಗನೂರ, ಗಂಗೂರ ಸಂಪಕರ್ಿಸುವ ಸಂಪರ್ಕ ರಸ್ತೆಯಲ್ಲಿ ಪ್ರವಾಹದ ನೀರು ನಿಂತು ಎರಡು ದಿನಗಳ ಕಾಲ ಸಂಪರ್ಕ ಬಂದ್ ಆಗಿತ್ತು. ಇದೀಗ ನದಿಯಲ್ಲಿ ನೀರು ಇಳಿಮುಖವಾಗತೊಡಗಿದ್ದರಿಂದ ರಸ್ತೆ ಮೇಲೆ ಆವರಿಸಿರುವ ನೀರು ಸಹಿತ ನಿಧಾನಕ್ಕೆ ಕಡಿಮೆ ಆಗತೊಡಗಿದೆ.
ಸ್ಥಳಕ್ಕೆ ಪಿಡಬ್ಲೂಡಿ ಎಇಇ ಜಿ.ಎಸ್.ಪಾಟೀಲ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದಾರೆ. ತಾಲೂಕಿನ ನಾಗರಹಾಳ ಗ್ರಾಮದಿಂದ ಅಯ್ಯನಗುಡಿವರೆಗಿನ ಅಂದಾಜು 10 ನದಿ ತೀರದ ಗ್ರಾಮಗಳಲ್ಲಿ ಮತ್ತೇ ಪ್ರವಾಹ ಪರಿಸ್ಥಿತಿಯ ಆತಂಕ ಎದುರಾಗಿತ್ತು. ಆದರೆ ಬಸವಸಾಗರದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಹೊರಗೆ ಹರಿಸಿದ್ದರಿಂದ ಆತಂಕ ನಿಧಾನವಾಗಿ ಕಡಿಮೆ ಆಯಿತು. ಈ ಮಧ್ಯೆ ಮತ್ತೇ ನದಿ ದಂಡೆಯ ಗ್ರಾಮಗಳ ರೈತರ ಜಮೀನಿನಲ್ಲಿ ಮಳೆಯ ನೀರಿನ ಜೊತೆಗೆ ಕೃಷ್ಣಾ ನದಿ ಪ್ರವಾಹದ ನೀರು ನುಗ್ಗಿ ಮೊದಲೇ ಬೆಳೆ ಹಾನಿಯಿಂದ ಕಂಗಾಲಾಗಿರುವ ಸಂತ್ರಸ್ತ ರೈತರು ಧೃತಿಗೆಡುವಂತೆ ಮಾಡಿದೆ. ನೋಡಲ್ ಅಧಿಕಾರಿಯೂ ಆಗಿರುವ ವಿಜಯಪುರ ಉಪ ವಿಭಾಗಾಧಿಕಾರಿ ಸೋಮಲಿಂಗ ಗೆಣ್ಣೂರ ಸ್ಥಳದಲ್ಲೇ ಬೀಡುಬಿಟ್ಟು ತಹಸೀಲ್ದಾರ್ ವಿನಯ್ಕುಮಾರ ಪಾಟೀಲ ಅವರೊಂದಿಗೆ ಚಚರ್ೆ ನಡೆಸಿ ಪರಿಸ್ಥಿತಿಯ ವರದಿಯನ್ನು ಜಿಲ್ಲಾಧಿಕಾರಿಗೆ ಸಲ್ಲಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 