ಮುದ್ದೇಬಿಹಾಳ: ಕೃಷ್ಣಾ ನದಿಗೆ ಹೆಚ್ಚಿನ ನೀರು ಬಿಡುಗಡೆ
ಲೋಕದರ್ಶನ ವರದಿ
ಮುದ್ದೇಬಿಹಾಳ 25: ಆಲಮಟ್ಟಿ ಜಲಾಶಯದಿಂದ ಕೃಷ್ಣಾ ನದಿಗೆ ಹೆಚ್ಚಿನ ನೀರು ಬಿಟ್ಟಿದ್ದರಿಂದಾಗಿ ತಂಗಡಗಿಯಿಂದ ಕಮಲದಿನ್ನಿ, ಕುಂಚಗನೂರ, ಗಂಗೂರ ಸಂಪಕರ್ಿಸುವ ಸಂಪರ್ಕ ರಸ್ತೆಯಲ್ಲಿ ಪ್ರವಾಹದ ನೀರು ನಿಂತು ಎರಡು ದಿನಗಳ ಕಾಲ ಸಂಪರ್ಕ ಬಂದ್ ಆಗಿತ್ತು. ಇದೀಗ ನದಿಯಲ್ಲಿ ನೀರು ಇಳಿಮುಖವಾಗತೊಡಗಿದ್ದರಿಂದ ರಸ್ತೆ ಮೇಲೆ ಆವರಿಸಿರುವ ನೀರು ಸಹಿತ ನಿಧಾನಕ್ಕೆ ಕಡಿಮೆ ಆಗತೊಡಗಿದೆ.
ಸ್ಥಳಕ್ಕೆ ಪಿಡಬ್ಲೂಡಿ ಎಇಇ ಜಿ.ಎಸ್.ಪಾಟೀಲ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದಾರೆ. ತಾಲೂಕಿನ ನಾಗರಹಾಳ ಗ್ರಾಮದಿಂದ ಅಯ್ಯನಗುಡಿವರೆಗಿನ ಅಂದಾಜು 10 ನದಿ ತೀರದ ಗ್ರಾಮಗಳಲ್ಲಿ ಮತ್ತೇ ಪ್ರವಾಹ ಪರಿಸ್ಥಿತಿಯ ಆತಂಕ ಎದುರಾಗಿತ್ತು. ಆದರೆ ಬಸವಸಾಗರದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಹೊರಗೆ ಹರಿಸಿದ್ದರಿಂದ ಆತಂಕ ನಿಧಾನವಾಗಿ ಕಡಿಮೆ ಆಯಿತು. ಈ ಮಧ್ಯೆ ಮತ್ತೇ ನದಿ ದಂಡೆಯ ಗ್ರಾಮಗಳ ರೈತರ ಜಮೀನಿನಲ್ಲಿ ಮಳೆಯ ನೀರಿನ ಜೊತೆಗೆ ಕೃಷ್ಣಾ ನದಿ ಪ್ರವಾಹದ ನೀರು ನುಗ್ಗಿ ಮೊದಲೇ ಬೆಳೆ ಹಾನಿಯಿಂದ ಕಂಗಾಲಾಗಿರುವ ಸಂತ್ರಸ್ತ ರೈತರು ಧೃತಿಗೆಡುವಂತೆ ಮಾಡಿದೆ. ನೋಡಲ್ ಅಧಿಕಾರಿಯೂ ಆಗಿರುವ ವಿಜಯಪುರ ಉಪ ವಿಭಾಗಾಧಿಕಾರಿ ಸೋಮಲಿಂಗ ಗೆಣ್ಣೂರ ಸ್ಥಳದಲ್ಲೇ ಬೀಡುಬಿಟ್ಟು ತಹಸೀಲ್ದಾರ್ ವಿನಯ್ಕುಮಾರ ಪಾಟೀಲ ಅವರೊಂದಿಗೆ ಚಚರ್ೆ ನಡೆಸಿ ಪರಿಸ್ಥಿತಿಯ ವರದಿಯನ್ನು ಜಿಲ್ಲಾಧಿಕಾರಿಗೆ ಸಲ್ಲಿಸಿದ್ದಾರೆ.
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ 