ಮುಧೋಳ ಕಂಠಿ ಕಾಲೇಜಿನ ಬಿ.ಎ 4ನೇ ಸೆಮ್ ಐಚ್ಚಿಕ ವಿಷಯದಲ್ಲಿ ಟಾಪರ್ಸ್
Mudhol Kanthi College B.A 4th Sem optional subject toppers
ಮುಧೋಳ ಕಂಠಿ ಕಾಲೇಜಿನ ಬಿ.ಎ 4ನೇ ಸೆಮ್ ಐಚ್ಚಿಕ ವಿಷಯದಲ್ಲಿ ಟಾಪರ್ಸ್
ಮುಧೋಳ, 10 ; ಬಾಗಲಕೋಟ ವಿಶ್ವವಿದ್ಯಾಲಯ, ಜಮಖಂಡಿ ಅವರು 2024-25 ನೇ ಸಾಲಿನ ಬಿ.ಎ 4ನೇ ಸೆಮ್ ಗೆ ನಡೆಸಿದ ಪರೀಕ್ಷೆಯ ಫಲಿತಾಂಶ ಪ್ರಕಟಿಸಿದೆ. ಬಾಗಲಕೋಟ ಬಿವ್ಹಿವ್ಹಿ ಸಂಘದ ಮುಧೋಳದ ಶ್ರೀ ಎಸ್.ಆರ್.ಕಂಠಿ ಮಹಾವಿದ್ಯಾಲಯದ ಕಲಾ ವಿಭಾಗದ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದ 4ನೇ ಸೆಮ್ ಸುದ್ದಿ ಸಂಸ್ಕರಣೆ ಮತ್ತು ಸಂಪಾದನೆ ಐಚ್ಚಿಕ ವಿಷಯದಲ್ಲಿ ರಾಜೇಶ್ವರಿ ಬಿರಡಿ (ಶೇ.84.66), ಚೈತ್ರಾ ಅಂಗಡಿ (ಶೇ.83.34), ಕಿರಣ ಬಡಿಗೇರ (ಶೇ.83.34), ಅನುಪಮಾ ಹೊಸಮನಿ (ಶೇ.82.66), ಕಾವೇರಿ ಧನಗರ (ಶೇ.82), ಸುನಂದಾ ಪರಮೇಶ್ವರ (ಶೇ.82) ವಿದ್ಯಾರ್ಥಿಗಳು ಕ್ರಮವಾಗಿ ಪ್ರಥಮ, ದ್ವಿತೀಯ, ತೃತೀಯ, ಚತುರ್ಥ ಸ್ಥಾನ ಪಡೆದು ವಿಭಾಗಕ್ಕೆ ಟಾಪರ್ಸ್ ರಾಗಿ ಮಹಾವಿದ್ಯಾಲಯಕ್ಕೆ ಮತ್ತು ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗಕ್ಕೆ ಕೀರ್ತಿ ತಂದಿರುವದಕ್ಕೆ ಬಿವ್ಹಿವ್ಹಿ ಸಂಘದ ಕಾರ್ಯಾಧ್ಯಕ್ಷ ಡಾ.ವೀರಣ್ಣ ಚರಂತಿಮಠ, ಗೌರವ ಕಾರ್ಯದರ್ಶಿ ಮಹೇಶ ಎನ್. ಅಥಣಿ, ಸಂಘದ ಕಾಲೇಜುಗಳ ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷ ಗುರುಬಸವ ಸೂಳಿಭಾವಿ, ಕಾಲೇಜು ಗಳ ಪದ ನಿಮಿತ್ಯ ಕಾರ್ಯದರ್ಶಿ ಡಾ.ಎಸ್.ಎನ್.ಗಾಂವಕರ ಹಾಗೂ ಸದಸ್ಯರು ಮತ್ತು ಕಾಲೇಜಿನ ಪ್ರಾಚಾರ್ಯ ಡಾ.ಮಲ್ಲಿಕಾರ್ಜುನ ಜರಕುಂಟಿ, ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ವಿಶ್ವನಾಥ ಮುನವಳ್ಳಿ, ಸಹ ಉಪನ್ಯಾಸಕಿ ಶ್ವೇತಾ ಶಿರಬಡಗಿ ಹಾಗೂ ಬೋಧಕ-ಬೋಧಕೇತರ ಸಿಬ್ಬಂದಿಯವರು ಅಭಿನಂದಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 