ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
Multi-crore fraud case: Shivananda Neelanna granted interim bail
ಬೆಳಗಾವಿ : ಬಹುಕೋಟಿ ವಂಚನೆ ಆರೋಪ ಪ್ರಕರಣ. ಆರೋಪಿ ಶಿವಾನಂದ ನೀಲಣ್ಣವರ್ ಗೆ ಅವರಿಗೆ ನ್ಯಾಯಾಲಯವು ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಬೆಂಗಳೂರು 93ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದಿಂದ ಜಾಮೀನು ಮಂಜೂರಾಗಿದೆ. 3 ಲಕ್ಷ ವೈಯಕ್ತಿಕ ಬಾಂಡ್, ಭಾರತ ಬಿಟ್ಟು ಹೋಗದಂತೆ, ತನಿಖೆಗೆ ಸಹಕಾರ ನೀಡುವಂತೆ ನಿಲಣ್ಣವರ ಅವರಿಗೆ ನ್ಯಾಯಾಲಯವು ಸೂಚನೆ ನೀಡಿದೆ.
ಸೋಮವಾರ ಅಥವಾ ಮಂಗಳವಾರ ಶಿವಾನಂದ ನೀಲಣ್ಣವರ ಬಿಡುಗಡೆ ಸಾಧ್ಯತೆ ಇದೆ.
ಸದ್ಯ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ನೀಲಣ್ಣವರ್ ಅವರು ಸಾರ್ವಜನಿಕರು, ಮಾಜಿ ಸೈನಿಕರಿಂದ ಹೆಚ್ಚಿನ ಬಡ್ಡಿ ಆಮಿಷವೊಡ್ಡಿ ಸಾವಿರಾರು ಕೋಟಿ ಹೂಡಿಕೆ ಮಾಡಿಕೊಂಡಿದ್ದರು.
ಶಿವಾನಂದ ನೀಲಣ್ಣವರ್ ಪರ ವಕೀಲ ಆರ್.ಜಿ ಪಾಟೀಲ್, ಸುಧೀರ್ ನಿರ್ವಾಣಿ ವಕಾಲತ್ತು ವಹಿಸಿದ್ದರು.
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ 