ರಾಯರ ಮಠದ ಆರಾಧನಾ ಮಹೋತ್ಸವದಲ್ಲಿ ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್ ಗೆ ಸನ್ಮಾನ

ರಾಯರ ಮಠದ ಆರಾಧನಾ ಮಹೋತ್ಸವದಲ್ಲಿ ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್ ಗೆ ಸನ್ಮಾನ  Municipal Council President Amjad Patel felicitated at the worship festival of Rayara Mutt

ಕೊಪ್ಪಳ 12 : ಶ್ರೀ ರಾಘವೇಂದ್ರ ಸ್ವಾಮಿಗಳ 543 ನೇ ಆರಾಧನಾ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಇಲ್ಲಿನ ರಾಯರ ಮಠದಲ್ಲಿ ಮಂಗಳವಾರ ವಿವಿಧ ಧಾರ್ಮಿಕ  ಕಾರ್ಯಕ್ರಮದಲ್ಲಿ ರಾಯರ ಮಠದ ಆಹ್ವಾನ ಸ್ವೀಕರಿಸಿ ಪಾಲ್ಗೊಂಡಿದ್ದ ಕೊಪ್ಪಳ ನಗರ ಸಭೆಯ ಅಧ್ಯಕ್ಷರಾದ ಅಮ್ಜದ್ ಪಟೇಲ್ ರವರಿಗೆ ಕಾರ್ಯಕ್ರಮದಲ್ಲಿ ಸನ್ಮಾನ ಮಾಡಿ ರಾಯರ ಮಠದ ಶ್ರೀಗಳು ಆಶೀರ್ವದಿಸಿದರು.

ಮಧ್ಯಾರಾಧನೆ ಅಂಗವಾಗಿ ರಾಯರ ಬೃಂದಾವನಕ್ಕೆ ಸುಪ್ರಭಾತ, ಅಷ್ಟೋತ್ತರ, ಪಂಚಾಮೃತ, ಅಭಿಷೇಕ ನೈವೇದ್ಯ, ಅಲಂಕಾರ ತೀರ್ಥ ಪ್ರಸಾದ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮ ಗಳು ಜರುಗಿತು, ಸದರಿ ಕಾರ್ಯಕ್ರಮದಲ್ಲಿ ಗೌರವ ಸನ್ಮಾನ ಸ್ವೀಕರಿಸಿ ಶ್ರೀ ರಾಘವೇಂದ್ರ ಸ್ವಾಮಿ ಗಳ ಕೃಪಾ ಆಶೀರ್ವಾದ ಪಡೆದು ಕೊಪ್ಪಳ ನಗರ ಸಭೆಯ ಅಧ್ಯಕ್ಷ ಅಮ್ಜದ್ ಪಟೇಲ್ ರವರು ಕಾರ್ಯಕ್ರಮ ಸಂಘಟಕರಿಗೆ ಆರಾಧನಾ ಮಹೋತ್ಸವದ ಶುಭಾಶಯ ಕೋರಿದರು ,ಅಪಾರ ಸಂಖ್ಯೆ ಯಲ್ಲಿ ಭಕ್ತ ಸಮೋಹ ಹಾಗೂ ಮಹಿಳೆಯರು ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.