ರೌಡಿಶೀಟರ್ ಪ್ರಕಾಶ್ ಕೊಲೆ: ಮತ್ತೋರ್ವನ ಬಂಧನ
ಬೆಂಗಳೂರು, ಏ. 29,ರೌಡಿಶೀಟರ್ ಪ್ರಕಾಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ ಆರೋಪಿಯನ್ನು ಸೋಲದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ.ಕೊಲೆ ಮಾಡಿ ಪರಾರಿಯಾಗಿದ್ದ ಶ್ರೇಯಸ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ವಿಭಾಗದ ಪೊಲೀಸರು 39 ವರ್ಷದ ಅಮೀರ್ ಅಲಿಯಾಸ್ ಲೋಕೇಶ್ ರೆಡ್ಡಿ, 25 ವರ್ಷದ ನಿಖಿಲ್ ನನ್ನು ಬಂಧಿಸಿದ್ದರು. ಇದೇ ತಿಂಗಳ 21ರಂದು ತನ್ನ ಪತಿ ಪ್ರಕಾಶ್ ಅಲಿಯಾಸ್ ಕ್ವಾಟೆ ನನ್ನು ಅಮೀರ್ ಎಂಬಾತ ತನ್ನ ಸಹಚರರೊಂದಿಗೆ ಕೂಡಿಕೊಂಡು ಮಧ್ಯಾಹ್ನ ಸುರದೇವನಪುರದಿಂದ ಸಿಲ್ವರ್ ಕಾರಿನಲ್ಲಿ ಅಪಹರಿಸಿ, ಮಾರಕಾಸ್ತ್ರಗಳಿಂದ ಚುಚ್ಚಿ ಕೊಲೆ ಮಾಡಿದ್ದು, ಆರೋಪಿಗಳನ್ನು ಬಂಧಿಸುವಂತೆ ಸೋಲದೇವನಹಳ್ಳಿ ಪೊಲೀಸ್ ಠಾಣೆಗೆ ಕೊಲೆಯಾದವ ಪತ್ನಿ ದೂರು ನೀಡಿದ್ದರು.ಕೊಲೆಯಾದ ಪ್ರಕಾಶ್ ರಾಜಾನುಕುಂಟೆ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿದ್ದು, ಈತ ತಮ್ಮನ್ನು ಜೂಜಾಟದಲ್ಲಿ ಮೋಸ ಮಾಡುವುದಲ್ಲದೇ,ಲಾಕ್ ಡೌನ್ ಇದ್ದರೂ ಮದ್ಯ ತರುವಂತೆ ಪೀಡಿಸುತ್ತಿದ್ದನು. ಅಲ್ಲದೇ, ತಮಗೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದನು. ಹೀಗಾಗಿ ಆಕ್ರೋಶಗೊಂಡ ತಾವು ಏ.21ರಂದು ಹೆಸರುಘಟ್ಟದ ಮತ್ಕೂರಿಯಲ್ಲಿ ಆತನನ್ನು ಕೊಲೆ ಮಾಡಿರುವುದಾಗಿ ಬಂಧಿತ ಆರೋಪಿಗಳು ಬಾಯ್ಬಿಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ 