ಬಲವಂತದ ಅತ್ಯಾಚಾರ ಎಸಗಿ ಮಹಿಳೆಯ ಕೊಲೆ
Murder of a woman after forcible rape.
ದೇವರಹಿಪ್ಪರಗಿ 26: ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ತಾಂಡಾ -1ರಲ್ಲಿ ಗುರುವಾರ ಸಾಯಂಕಾಲ ಮಹಿಳೆಯ ಮೇಲೆ ಬಲವಂತದಿಂದ ಅತ್ಯಾಚಾರ ಎಸಗಿ ಕೊಲೆ ಮಾಡಿ ಪರಾರಿಯಾಗಿದ್ದಾನೆ ಎಂದು ಪ್ರಕರಣ ದಾಖಲು ಮಾಡಿದ್ದಾರೆ. 50ವರ್ಷ ಮೋತಾಬಾಯಿ ಸೀತಾರಾಮ ರಾಠೋಡ ಮಹಿಳೆ ಕೊಲೆಯಾದ ದುರ್ದೈವಿ.
ಈ ಕುರಿತು ಮೃತರ ಮಗನಾದ ಕುಮಾರ ಸೀತಾರಾಮ ರಾಠೋಡ ನೀಡಿರುವ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿಯ ಪತ್ತೆಗೆ ಹುಡುಕಾಟ ನಡೆಸುತ್ತಿದ್ದಾರೆ. ನಾರಾಯಣ ಕಾಸು ಚವ್ಹಾಣ ಬಲವಂತದಿಂದ ಅತ್ಯಾಚಾರ ಎಸೆಗಿ ಆಯುಧದಿಂದ ಹೊಡೆದು ಕೊಲೆ ಮಾಡಿರುತ್ತಾನೆ ಎಂದು ಮೃತರ ಮಗನು ಪ್ರಕರಣ ದಾಖಲಿಸಿರುತ್ತಾನೆ.
ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಲಕ್ಷ್ಮಣ ನಿಂಬರಗಿ ಹೆ.ಎಸ್.ಪಿ ರಾಮನಗೌಡ ಹಟ್ಟಿ, ಡಿ.ಎಸ್.ಪಿ ಟಿ.ಎಸ್.ಸುಲ್ಪಿ, ಪಿಎಸ್ಐ ಸಚಿನ್ ಆಲಮೇಲಕರ್ ಅವರು ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ. ಈ ಕುರಿತು ದೇವರಹಿಪ್ಪರಗಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 