ಬಲವಂತದ ಅತ್ಯಾಚಾರ ಎಸಗಿ ಮಹಿಳೆಯ ಕೊಲೆ
Murder of a woman after forcible rape.
ದೇವರಹಿಪ್ಪರಗಿ 26: ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ತಾಂಡಾ -1ರಲ್ಲಿ ಗುರುವಾರ ಸಾಯಂಕಾಲ ಮಹಿಳೆಯ ಮೇಲೆ ಬಲವಂತದಿಂದ ಅತ್ಯಾಚಾರ ಎಸಗಿ ಕೊಲೆ ಮಾಡಿ ಪರಾರಿಯಾಗಿದ್ದಾನೆ ಎಂದು ಪ್ರಕರಣ ದಾಖಲು ಮಾಡಿದ್ದಾರೆ. 50ವರ್ಷ ಮೋತಾಬಾಯಿ ಸೀತಾರಾಮ ರಾಠೋಡ ಮಹಿಳೆ ಕೊಲೆಯಾದ ದುರ್ದೈವಿ.
ಈ ಕುರಿತು ಮೃತರ ಮಗನಾದ ಕುಮಾರ ಸೀತಾರಾಮ ರಾಠೋಡ ನೀಡಿರುವ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿಯ ಪತ್ತೆಗೆ ಹುಡುಕಾಟ ನಡೆಸುತ್ತಿದ್ದಾರೆ. ನಾರಾಯಣ ಕಾಸು ಚವ್ಹಾಣ ಬಲವಂತದಿಂದ ಅತ್ಯಾಚಾರ ಎಸೆಗಿ ಆಯುಧದಿಂದ ಹೊಡೆದು ಕೊಲೆ ಮಾಡಿರುತ್ತಾನೆ ಎಂದು ಮೃತರ ಮಗನು ಪ್ರಕರಣ ದಾಖಲಿಸಿರುತ್ತಾನೆ.
ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಲಕ್ಷ್ಮಣ ನಿಂಬರಗಿ ಹೆ.ಎಸ್.ಪಿ ರಾಮನಗೌಡ ಹಟ್ಟಿ, ಡಿ.ಎಸ್.ಪಿ ಟಿ.ಎಸ್.ಸುಲ್ಪಿ, ಪಿಎಸ್ಐ ಸಚಿನ್ ಆಲಮೇಲಕರ್ ಅವರು ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ. ಈ ಕುರಿತು ದೇವರಹಿಪ್ಪರಗಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 